Categories: ಮಂಡ್ಯ

ಶಾಲೆಯಲ್ಲಿ ಹೋಳಿ ಹಬ್ಬ ಆಚರಿಸಿ ಭೋಜನ ಮಾಡಿದ ನಂತರ 30 ಮಕ್ಕಳಿಗೆ ಫುಡ್ ಪಾಯಿಸನ್: ಓರ್ವ ಬಾಲಕ ಸಾವು: ಮಂಡ್ಯ ಜಿಲ್ಲಾಸ್ಪತ್ರೆಗೆ ಡಿಸಿ, ಎಸ್ಪಿ ಭೇಟಿ ಪರಿಶೀಲನೆ

ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಕೆಲವು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ‌ ಅವರು ಘಟನಾ ಸ್ಥಳಕ್ಕೆ ಹಾಗು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದು, ಮಕ್ಕಳ ಆರೋಗ್ಯವನ್ನು ವಿಚಾರಿಸಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

13 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago