ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಕೆಲವು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನಾ ಸ್ಥಳಕ್ಕೆ ಹಾಗು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದು, ಮಕ್ಕಳ ಆರೋಗ್ಯವನ್ನು ವಿಚಾರಿಸಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…