ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಕೆಲವು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನಾ ಸ್ಥಳಕ್ಕೆ ಹಾಗು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದು, ಮಕ್ಕಳ ಆರೋಗ್ಯವನ್ನು ವಿಚಾರಿಸಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…