ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಕೆಲವು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನಾ ಸ್ಥಳಕ್ಕೆ ಹಾಗು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದು, ಮಕ್ಕಳ ಆರೋಗ್ಯವನ್ನು ವಿಚಾರಿಸಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಕ್ರಾಸ್ ಬಳಿ ನಡೆದಿದೆ... ನೆಲಮಂಗಲದಿಂದ…
ಸ್ವಲ್ಪ ಯೋಚಿಸಿ........ ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ - ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ…
ದೊಡ್ಡಬಳ್ಳಾಪುರ: ಆಕೆ ಪ್ರತಿನಿತ್ಯ ಮಕ್ಕಳಿಗೆ ಜೀವನ ಪಾಠ ಹೇಳಿಕೊಡುತ್ತಿದ್ದ ಉಪನ್ಯಾಸಕಿ. ಗಂಡನ ಜೊತೆಯಲ್ಲಿ ಇಬ್ಬರ ಮಕ್ಕಳೊಂದಿಗೆ ಸುಖವಾಗಿ ಸಂಸಾರ ಮಾಡುತ್ತಿದ್ದ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. ಈ ವರ್ಷದಿಂದ ಚನ್ನವೀರನಹಳ್ಳಿಯಲ್ಲಿ ಹೊಸದಾಗಿ ಪದವಿ ಪೂರ್ವ ಕಾಲೇಜು ಆರಂಭವಾಗಿದೆ.…
ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿ....... ( ಲೇಖನ ಸ್ವಲ್ಪ ದೀರ್ಘವಾಗಿದೆ. ವಿಷಯದ ಮಹತ್ವದ ದೃಷ್ಟಿಯಿಂದ ಹೆಚ್ಚು ವಿವರಣೆ ನೀಡಲಾಗಿದೆ. )…
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…