ಶಾಲೆ ಉಳಿವಿಗಾಗಿ “ನಮ್ಮ ಶಾಲೆ ನಮ್ಮ ಹಕ್ಕು” ಅಭಿಯಾನ

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ “ನಮ್ಮ ಶಾಲೆ ನಮ್ಮ ಹಕ್ಕು” ಎಂಬ ಹೆಸರಲ್ಲಿ ಹಳೇ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಗ್ರಾಮದ ಹೆಸರಾಂತ ಶ್ರೀ ಮಾರುತಿ ಪ್ರೌಢಶಾಲೆಯನ್ನು ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ಎಂದು ಹಳೆ ವಿದ್ಯಾರ್ಥಿಗಳು ಆರೋಪಿಸಿದರು.

1972ರಲ್ಲಿ ಅಂದಿನ ದೊಡ್ಡಬಳ್ಳಾಪುರ ಶಾಸಕರಾದ ಜಿ.ರಾಮೇಗೌಡರ ಸಹಕಾರದಿಂದ ಪ್ರಾರಂಭವಾಗಿ ಹಿಂದಿನಿಂದಲೂ ಸರ್ಕಾರಿ ಅನುದಾನದಿಂದ ನಡೆಯುತ್ತಿದೆ. ಈ ಶ್ರೀ ಮಾರುತಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿ ಈಗಾಗಲೇ ಹೆಚ್ಚಿನ ಪ್ರಸಿದ್ಧಿ ಪಡೆದಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ  ವಿವಿಧ ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಉತ್ತಮ ಸ್ಥಾನ- ಮಾನ ಗಳಿಸಿದ್ದಾರೆ. ಆದರೆ ಈ ಶಾಲೆಯ ಆವರಣದಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಸ್ಥಾಪಿಸುವ ಮೂಲಕ ಸರ್ಕಾರಿ ಅನುದಾನಿತ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ನಮ್ಮ ಶಾಲೆಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಉಳಿವಿಗಾಗಿ ಹಳೆಯ ವಿದ್ಯಾರ್ಥಿಗಳಿಂದ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಿ ರಕ್ತ ಕೊಟ್ಟೆವು ಪ್ರಾಣ ಬಿಡೆವು ಎಂಬ ಸಂದೇಶವನ್ನು ಈ ಮೂಲಕ ಶಾಲೆಯ ಆಡಳಿತ ಮಂಡಳಿಗೆ ನೀಡುತ್ತಿದ್ದೇವೆ ಎಂದು ಹಳೆ ವಿದ್ಯಾರ್ಥಿ ರಾಜಘಟ್ಟ ಗಣೇಶ್ ತಿಳಿಸಿದರು.

ಹಳೇ ವಿದ್ಯಾರ್ಥಿಗಳಾದ ಸುರೇಶ್, ವಿನೋದ್  ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳ ಜೀವನ ರೂಪಿಸಿರುವ ಮಾರುತಿ ಪ್ರೌಢಶಾಲೆಗೆ ಇಂದು ಅಳಿವು ಉಳಿವಿನ ಪರಿಸ್ಥಿತಿ ಎದುರಾಗಿರುವುದು ವಿಪರ್ಯಾಸ, ನಮ್ಮ ಶಾಲೆ ಉಳಿವಿಗಾಗಿ ನಾವೆಲ್ಲರೂ ಒಟ್ಟಾಗಿ ಮುಂದಾಗಿದ್ದೇವೆ. ಸುತ್ತಲ ಹತ್ತಾರು ಹಳ್ಳಿಗಳ ವಿದ್ಯಾಭ್ಯಾಸಕ್ಕೆ ಮೂಲವಾಗಿರುವ ಸರ್ಕಾರಿ ಅನುದಾನಿತ ಶಾಲೆ ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ನಮ್ಮ ಶಾಲೆ ಬಿಟ್ಟುಕೊಡುವ ಮಾತೇ ಇಲ್ಲ ಇದು ನಮ್ಮ ಶಾಲೆ ಎಂದರು.

ಈ ಸಂದರ್ಭದಲ್ಲಿ ಸುರೇಶ, ವಿನೋದ್, ಅನಂತ್, ವೇಣು, ಮಂಜುನಾಥ್, ಅಂಬರೀಶ್, ನವೀನ್, ಗಂಗರಾಜು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

11 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

13 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

23 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago