ಶಾಲೆ ಉಳಿವಿಗಾಗಿ “ನಮ್ಮ ಶಾಲೆ ನಮ್ಮ ಹಕ್ಕು” ಅಭಿಯಾನ

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ “ನಮ್ಮ ಶಾಲೆ ನಮ್ಮ ಹಕ್ಕು” ಎಂಬ ಹೆಸರಲ್ಲಿ ಹಳೇ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಗ್ರಾಮದ ಹೆಸರಾಂತ ಶ್ರೀ ಮಾರುತಿ ಪ್ರೌಢಶಾಲೆಯನ್ನು ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ಎಂದು ಹಳೆ ವಿದ್ಯಾರ್ಥಿಗಳು ಆರೋಪಿಸಿದರು.

1972ರಲ್ಲಿ ಅಂದಿನ ದೊಡ್ಡಬಳ್ಳಾಪುರ ಶಾಸಕರಾದ ಜಿ.ರಾಮೇಗೌಡರ ಸಹಕಾರದಿಂದ ಪ್ರಾರಂಭವಾಗಿ ಹಿಂದಿನಿಂದಲೂ ಸರ್ಕಾರಿ ಅನುದಾನದಿಂದ ನಡೆಯುತ್ತಿದೆ. ಈ ಶ್ರೀ ಮಾರುತಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿ ಈಗಾಗಲೇ ಹೆಚ್ಚಿನ ಪ್ರಸಿದ್ಧಿ ಪಡೆದಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ  ವಿವಿಧ ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಉತ್ತಮ ಸ್ಥಾನ- ಮಾನ ಗಳಿಸಿದ್ದಾರೆ. ಆದರೆ ಈ ಶಾಲೆಯ ಆವರಣದಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಸ್ಥಾಪಿಸುವ ಮೂಲಕ ಸರ್ಕಾರಿ ಅನುದಾನಿತ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ನಮ್ಮ ಶಾಲೆಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಉಳಿವಿಗಾಗಿ ಹಳೆಯ ವಿದ್ಯಾರ್ಥಿಗಳಿಂದ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಿ ರಕ್ತ ಕೊಟ್ಟೆವು ಪ್ರಾಣ ಬಿಡೆವು ಎಂಬ ಸಂದೇಶವನ್ನು ಈ ಮೂಲಕ ಶಾಲೆಯ ಆಡಳಿತ ಮಂಡಳಿಗೆ ನೀಡುತ್ತಿದ್ದೇವೆ ಎಂದು ಹಳೆ ವಿದ್ಯಾರ್ಥಿ ರಾಜಘಟ್ಟ ಗಣೇಶ್ ತಿಳಿಸಿದರು.

ಹಳೇ ವಿದ್ಯಾರ್ಥಿಗಳಾದ ಸುರೇಶ್, ವಿನೋದ್  ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳ ಜೀವನ ರೂಪಿಸಿರುವ ಮಾರುತಿ ಪ್ರೌಢಶಾಲೆಗೆ ಇಂದು ಅಳಿವು ಉಳಿವಿನ ಪರಿಸ್ಥಿತಿ ಎದುರಾಗಿರುವುದು ವಿಪರ್ಯಾಸ, ನಮ್ಮ ಶಾಲೆ ಉಳಿವಿಗಾಗಿ ನಾವೆಲ್ಲರೂ ಒಟ್ಟಾಗಿ ಮುಂದಾಗಿದ್ದೇವೆ. ಸುತ್ತಲ ಹತ್ತಾರು ಹಳ್ಳಿಗಳ ವಿದ್ಯಾಭ್ಯಾಸಕ್ಕೆ ಮೂಲವಾಗಿರುವ ಸರ್ಕಾರಿ ಅನುದಾನಿತ ಶಾಲೆ ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ನಮ್ಮ ಶಾಲೆ ಬಿಟ್ಟುಕೊಡುವ ಮಾತೇ ಇಲ್ಲ ಇದು ನಮ್ಮ ಶಾಲೆ ಎಂದರು.

ಈ ಸಂದರ್ಭದಲ್ಲಿ ಸುರೇಶ, ವಿನೋದ್, ಅನಂತ್, ವೇಣು, ಮಂಜುನಾಥ್, ಅಂಬರೀಶ್, ನವೀನ್, ಗಂಗರಾಜು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

4 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

5 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

11 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

22 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

22 hours ago