ಶಾಲೆ ಉಳಿವಿಗಾಗಿ “ನಮ್ಮ ಶಾಲೆ ನಮ್ಮ ಹಕ್ಕು” ಅಭಿಯಾನ

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ “ನಮ್ಮ ಶಾಲೆ ನಮ್ಮ ಹಕ್ಕು” ಎಂಬ ಹೆಸರಲ್ಲಿ ಹಳೇ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಗ್ರಾಮದ ಹೆಸರಾಂತ ಶ್ರೀ ಮಾರುತಿ ಪ್ರೌಢಶಾಲೆಯನ್ನು ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ಎಂದು ಹಳೆ ವಿದ್ಯಾರ್ಥಿಗಳು ಆರೋಪಿಸಿದರು.

1972ರಲ್ಲಿ ಅಂದಿನ ದೊಡ್ಡಬಳ್ಳಾಪುರ ಶಾಸಕರಾದ ಜಿ.ರಾಮೇಗೌಡರ ಸಹಕಾರದಿಂದ ಪ್ರಾರಂಭವಾಗಿ ಹಿಂದಿನಿಂದಲೂ ಸರ್ಕಾರಿ ಅನುದಾನದಿಂದ ನಡೆಯುತ್ತಿದೆ. ಈ ಶ್ರೀ ಮಾರುತಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿ ಈಗಾಗಲೇ ಹೆಚ್ಚಿನ ಪ್ರಸಿದ್ಧಿ ಪಡೆದಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ  ವಿವಿಧ ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಉತ್ತಮ ಸ್ಥಾನ- ಮಾನ ಗಳಿಸಿದ್ದಾರೆ. ಆದರೆ ಈ ಶಾಲೆಯ ಆವರಣದಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಸ್ಥಾಪಿಸುವ ಮೂಲಕ ಸರ್ಕಾರಿ ಅನುದಾನಿತ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ನಮ್ಮ ಶಾಲೆಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಉಳಿವಿಗಾಗಿ ಹಳೆಯ ವಿದ್ಯಾರ್ಥಿಗಳಿಂದ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಿ ರಕ್ತ ಕೊಟ್ಟೆವು ಪ್ರಾಣ ಬಿಡೆವು ಎಂಬ ಸಂದೇಶವನ್ನು ಈ ಮೂಲಕ ಶಾಲೆಯ ಆಡಳಿತ ಮಂಡಳಿಗೆ ನೀಡುತ್ತಿದ್ದೇವೆ ಎಂದು ಹಳೆ ವಿದ್ಯಾರ್ಥಿ ರಾಜಘಟ್ಟ ಗಣೇಶ್ ತಿಳಿಸಿದರು.

ಹಳೇ ವಿದ್ಯಾರ್ಥಿಗಳಾದ ಸುರೇಶ್, ವಿನೋದ್  ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳ ಜೀವನ ರೂಪಿಸಿರುವ ಮಾರುತಿ ಪ್ರೌಢಶಾಲೆಗೆ ಇಂದು ಅಳಿವು ಉಳಿವಿನ ಪರಿಸ್ಥಿತಿ ಎದುರಾಗಿರುವುದು ವಿಪರ್ಯಾಸ, ನಮ್ಮ ಶಾಲೆ ಉಳಿವಿಗಾಗಿ ನಾವೆಲ್ಲರೂ ಒಟ್ಟಾಗಿ ಮುಂದಾಗಿದ್ದೇವೆ. ಸುತ್ತಲ ಹತ್ತಾರು ಹಳ್ಳಿಗಳ ವಿದ್ಯಾಭ್ಯಾಸಕ್ಕೆ ಮೂಲವಾಗಿರುವ ಸರ್ಕಾರಿ ಅನುದಾನಿತ ಶಾಲೆ ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ನಮ್ಮ ಶಾಲೆ ಬಿಟ್ಟುಕೊಡುವ ಮಾತೇ ಇಲ್ಲ ಇದು ನಮ್ಮ ಶಾಲೆ ಎಂದರು.

ಈ ಸಂದರ್ಭದಲ್ಲಿ ಸುರೇಶ, ವಿನೋದ್, ಅನಂತ್, ವೇಣು, ಮಂಜುನಾಥ್, ಅಂಬರೀಶ್, ನವೀನ್, ಗಂಗರಾಜು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

12 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago