ಶಾಲೆ ಉಳಿವಿಗಾಗಿ “ನಮ್ಮ ಶಾಲೆ ನಮ್ಮ ಹಕ್ಕು” ಅಭಿಯಾನ

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ “ನಮ್ಮ ಶಾಲೆ ನಮ್ಮ ಹಕ್ಕು” ಎಂಬ ಹೆಸರಲ್ಲಿ ಹಳೇ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಗ್ರಾಮದ ಹೆಸರಾಂತ ಶ್ರೀ ಮಾರುತಿ ಪ್ರೌಢಶಾಲೆಯನ್ನು ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ಎಂದು ಹಳೆ ವಿದ್ಯಾರ್ಥಿಗಳು ಆರೋಪಿಸಿದರು.

1972ರಲ್ಲಿ ಅಂದಿನ ದೊಡ್ಡಬಳ್ಳಾಪುರ ಶಾಸಕರಾದ ಜಿ.ರಾಮೇಗೌಡರ ಸಹಕಾರದಿಂದ ಪ್ರಾರಂಭವಾಗಿ ಹಿಂದಿನಿಂದಲೂ ಸರ್ಕಾರಿ ಅನುದಾನದಿಂದ ನಡೆಯುತ್ತಿದೆ. ಈ ಶ್ರೀ ಮಾರುತಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿ ಈಗಾಗಲೇ ಹೆಚ್ಚಿನ ಪ್ರಸಿದ್ಧಿ ಪಡೆದಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ  ವಿವಿಧ ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಉತ್ತಮ ಸ್ಥಾನ- ಮಾನ ಗಳಿಸಿದ್ದಾರೆ. ಆದರೆ ಈ ಶಾಲೆಯ ಆವರಣದಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಸ್ಥಾಪಿಸುವ ಮೂಲಕ ಸರ್ಕಾರಿ ಅನುದಾನಿತ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ನಮ್ಮ ಶಾಲೆಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಉಳಿವಿಗಾಗಿ ಹಳೆಯ ವಿದ್ಯಾರ್ಥಿಗಳಿಂದ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಿ ರಕ್ತ ಕೊಟ್ಟೆವು ಪ್ರಾಣ ಬಿಡೆವು ಎಂಬ ಸಂದೇಶವನ್ನು ಈ ಮೂಲಕ ಶಾಲೆಯ ಆಡಳಿತ ಮಂಡಳಿಗೆ ನೀಡುತ್ತಿದ್ದೇವೆ ಎಂದು ಹಳೆ ವಿದ್ಯಾರ್ಥಿ ರಾಜಘಟ್ಟ ಗಣೇಶ್ ತಿಳಿಸಿದರು.

ಹಳೇ ವಿದ್ಯಾರ್ಥಿಗಳಾದ ಸುರೇಶ್, ವಿನೋದ್  ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳ ಜೀವನ ರೂಪಿಸಿರುವ ಮಾರುತಿ ಪ್ರೌಢಶಾಲೆಗೆ ಇಂದು ಅಳಿವು ಉಳಿವಿನ ಪರಿಸ್ಥಿತಿ ಎದುರಾಗಿರುವುದು ವಿಪರ್ಯಾಸ, ನಮ್ಮ ಶಾಲೆ ಉಳಿವಿಗಾಗಿ ನಾವೆಲ್ಲರೂ ಒಟ್ಟಾಗಿ ಮುಂದಾಗಿದ್ದೇವೆ. ಸುತ್ತಲ ಹತ್ತಾರು ಹಳ್ಳಿಗಳ ವಿದ್ಯಾಭ್ಯಾಸಕ್ಕೆ ಮೂಲವಾಗಿರುವ ಸರ್ಕಾರಿ ಅನುದಾನಿತ ಶಾಲೆ ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ನಮ್ಮ ಶಾಲೆ ಬಿಟ್ಟುಕೊಡುವ ಮಾತೇ ಇಲ್ಲ ಇದು ನಮ್ಮ ಶಾಲೆ ಎಂದರು.

ಈ ಸಂದರ್ಭದಲ್ಲಿ ಸುರೇಶ, ವಿನೋದ್, ಅನಂತ್, ವೇಣು, ಮಂಜುನಾಥ್, ಅಂಬರೀಶ್, ನವೀನ್, ಗಂಗರಾಜು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

5 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

7 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

11 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

13 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago