Categories: ರಾಯಚೂರು

ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳದ್ದೇ ದರ್ಬಾರ್- ಸಾರ್ವಜನಿಕರ ಆಕ್ರೋಶ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ಹೆಸರಿಗೆ ಮಾತ್ರ. 2014-15 ರಲ್ಲಿ ಮರುವಿಂಗಡಣೆ ಪ್ರಕಾರ ಶಾವಂತಗೇರಾ ಗ್ರಾಮ ಪಂಚಾಯತಿಯಾಗಿದೆ.

ಈ ಪಂಚಾಯಿತಿಯಲ್ಲಿ ಆಡಳಿತ ಅಧಿಕಾರಿಯಾದ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಮತ್ತು ಪ್ರಭಾರಿ ಪಿಡಿಓ ಶಂಶುದ್ದೀನ್ ಇನ್ನೂಳಿದ ಅಧಿಕಾರಿಳದ್ದೇ ದರ್ಬಾರ್ ಆಗಿದೆ ಎಂದು ಇಲ್ಲಿನ ಸ್ಥಳೀಯರು ಹಾಗೂ ಬಹುಜನ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ನರಸಣ್ಣಗೌಡ ಬಿ.ಗಣೇಕಲ್ ಆರೋಪಿಸಿದ್ದಾರೆ…

ಮೊದಲು ಹಿರೇಬೂದುರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಯಾಗಿತ್ತು, ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟಿದ್ದ ಮದರಕಲ್ ಗ್ರಾಮವೂ ಶಾವಂತಗೇರಾ ಗ್ರಾಮ ಪಂಚಾಯತಿಗೆ ಸೇರಿಸಿಕೊಂಡಿರುವ ಸಮಸ್ಯೆಯಿಂದ ಮದರಕಲ್ ಗ್ರಾಮದ ಪ್ರಭಾವಿ ಮುಖಂಡರು ಕೋರ್ಟ್ ಮೊರೆ ಹೋಗಿದ್ದರಿಂದ ಹೇಮನಾಳ ಮತ್ತು ಶಾವಂತಗೇರಾ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿರುವುದಿಲ್ಲ.

ಸದ್ಯ ಶಾವಂತಗೇರಾ ಗ್ರಾಮ ಪಂಚಾಯತಿ ಸಮಸ್ಯೆಗಳ ಆಗರವಾಗಿದೆ. ಅದರಲ್ಲಿ ಗ್ರಾಮ ಪಂಚಾಯತಿ ಇರುವುದು ಮೂಲಭೂತ ಸಮಸ್ಯೆಗಳಾದ ಬೆಳಕು, ನೀರು, ವಸತಿ ಪೂರೈಸಲು. ಆದರೆ, ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಚುನಾಯಿತ ಸದಸ್ಯರು ಇರಲಾರದಿಂದ “ಬೆಕ್ಕು ಇಲ್ಲದ ಮನೆಯಲ್ಲಿ ಇಲಿಚಾಮಟ ಲಾಗ ಹೊಡೆದಂತೆ” ಎಂಬ ಗಾದೆಯಂತೆ ಇಒ ಮತ್ತು ಪಿಡಿಒಗಳ ಚೆಲ್ಲಾಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023-24ನೇ ಸಾಲಿನಲ್ಲಿ ವಸತಿ ಯೋಜನೆ ಅಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 30, ಬಸವ 80, ಪಿಎಮ್ಆರ್ ವೈಯ್ 372 ಸಮೀಕ್ಷೆ ಪಟ್ಟಿಯಲ್ಲಿ ವಸತಿಗಳು ಮಂಜೂರಾಗಿವೆ. ಆದರೆ, ಅಭಿವೃದ್ಧಿ ಅಧಿಕಾರಿ ಶಂಶುದ್ಧೀನ್ ಅವರು ರಾಜಕೀಯ ವ್ಯಕ್ತಿಗಳ ಗುಲಾಮ ಅಥವಾ ಗುಮಾಸ್ತರಾಗಿ ಕೆಲಸ ಮಾಡಿ, ರಾಜಕೀಯ ಪ್ರಭಾವಿಗಳ ಸಂಬಂಧಕರಿಗೆ ಮನೆಗಳು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಳಿತಾಧಿಕಾರಿಯಾದ ಬಸವರಾಜ ಹಟ್ಟಿ ಮತ್ತು ಪಿಡಿಓ ಶಂಶುದ್ಧೀನ್ ಅವರು ಮನೆಗಳು ಹಾಕುತ್ತೇವೆಂದು 20 ಸಾವಿರದಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವಸೂಲಿ ಮಾಡಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಪಿಡಿಓ ಮತ್ತು ಇಓ ರವರು ಪಂಚಾಯತ್ ರಾಜ್ಯ ಕಾಯ್ದೆ 111 ಆಕ್ಟ್ ಪ್ರಕಾರ ಕಾರ್ಯನಿರ್ವಹಸುತ್ತಿಲ್ಲ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

9 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago