Categories: ರಾಯಚೂರು

ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳದ್ದೇ ದರ್ಬಾರ್- ಸಾರ್ವಜನಿಕರ ಆಕ್ರೋಶ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ಹೆಸರಿಗೆ ಮಾತ್ರ. 2014-15 ರಲ್ಲಿ ಮರುವಿಂಗಡಣೆ ಪ್ರಕಾರ ಶಾವಂತಗೇರಾ ಗ್ರಾಮ ಪಂಚಾಯತಿಯಾಗಿದೆ.

ಈ ಪಂಚಾಯಿತಿಯಲ್ಲಿ ಆಡಳಿತ ಅಧಿಕಾರಿಯಾದ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಮತ್ತು ಪ್ರಭಾರಿ ಪಿಡಿಓ ಶಂಶುದ್ದೀನ್ ಇನ್ನೂಳಿದ ಅಧಿಕಾರಿಳದ್ದೇ ದರ್ಬಾರ್ ಆಗಿದೆ ಎಂದು ಇಲ್ಲಿನ ಸ್ಥಳೀಯರು ಹಾಗೂ ಬಹುಜನ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ನರಸಣ್ಣಗೌಡ ಬಿ.ಗಣೇಕಲ್ ಆರೋಪಿಸಿದ್ದಾರೆ…

ಮೊದಲು ಹಿರೇಬೂದುರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಯಾಗಿತ್ತು, ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟಿದ್ದ ಮದರಕಲ್ ಗ್ರಾಮವೂ ಶಾವಂತಗೇರಾ ಗ್ರಾಮ ಪಂಚಾಯತಿಗೆ ಸೇರಿಸಿಕೊಂಡಿರುವ ಸಮಸ್ಯೆಯಿಂದ ಮದರಕಲ್ ಗ್ರಾಮದ ಪ್ರಭಾವಿ ಮುಖಂಡರು ಕೋರ್ಟ್ ಮೊರೆ ಹೋಗಿದ್ದರಿಂದ ಹೇಮನಾಳ ಮತ್ತು ಶಾವಂತಗೇರಾ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿರುವುದಿಲ್ಲ.

ಸದ್ಯ ಶಾವಂತಗೇರಾ ಗ್ರಾಮ ಪಂಚಾಯತಿ ಸಮಸ್ಯೆಗಳ ಆಗರವಾಗಿದೆ. ಅದರಲ್ಲಿ ಗ್ರಾಮ ಪಂಚಾಯತಿ ಇರುವುದು ಮೂಲಭೂತ ಸಮಸ್ಯೆಗಳಾದ ಬೆಳಕು, ನೀರು, ವಸತಿ ಪೂರೈಸಲು. ಆದರೆ, ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಚುನಾಯಿತ ಸದಸ್ಯರು ಇರಲಾರದಿಂದ “ಬೆಕ್ಕು ಇಲ್ಲದ ಮನೆಯಲ್ಲಿ ಇಲಿಚಾಮಟ ಲಾಗ ಹೊಡೆದಂತೆ” ಎಂಬ ಗಾದೆಯಂತೆ ಇಒ ಮತ್ತು ಪಿಡಿಒಗಳ ಚೆಲ್ಲಾಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023-24ನೇ ಸಾಲಿನಲ್ಲಿ ವಸತಿ ಯೋಜನೆ ಅಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 30, ಬಸವ 80, ಪಿಎಮ್ಆರ್ ವೈಯ್ 372 ಸಮೀಕ್ಷೆ ಪಟ್ಟಿಯಲ್ಲಿ ವಸತಿಗಳು ಮಂಜೂರಾಗಿವೆ. ಆದರೆ, ಅಭಿವೃದ್ಧಿ ಅಧಿಕಾರಿ ಶಂಶುದ್ಧೀನ್ ಅವರು ರಾಜಕೀಯ ವ್ಯಕ್ತಿಗಳ ಗುಲಾಮ ಅಥವಾ ಗುಮಾಸ್ತರಾಗಿ ಕೆಲಸ ಮಾಡಿ, ರಾಜಕೀಯ ಪ್ರಭಾವಿಗಳ ಸಂಬಂಧಕರಿಗೆ ಮನೆಗಳು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಳಿತಾಧಿಕಾರಿಯಾದ ಬಸವರಾಜ ಹಟ್ಟಿ ಮತ್ತು ಪಿಡಿಓ ಶಂಶುದ್ಧೀನ್ ಅವರು ಮನೆಗಳು ಹಾಕುತ್ತೇವೆಂದು 20 ಸಾವಿರದಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವಸೂಲಿ ಮಾಡಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಪಿಡಿಓ ಮತ್ತು ಇಓ ರವರು ಪಂಚಾಯತ್ ರಾಜ್ಯ ಕಾಯ್ದೆ 111 ಆಕ್ಟ್ ಪ್ರಕಾರ ಕಾರ್ಯನಿರ್ವಹಸುತ್ತಿಲ್ಲ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

6 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

10 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

11 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

18 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago