Categories: ರಾಯಚೂರು

ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳದ್ದೇ ದರ್ಬಾರ್- ಸಾರ್ವಜನಿಕರ ಆಕ್ರೋಶ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ಹೆಸರಿಗೆ ಮಾತ್ರ. 2014-15 ರಲ್ಲಿ ಮರುವಿಂಗಡಣೆ ಪ್ರಕಾರ ಶಾವಂತಗೇರಾ ಗ್ರಾಮ ಪಂಚಾಯತಿಯಾಗಿದೆ.

ಈ ಪಂಚಾಯಿತಿಯಲ್ಲಿ ಆಡಳಿತ ಅಧಿಕಾರಿಯಾದ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಮತ್ತು ಪ್ರಭಾರಿ ಪಿಡಿಓ ಶಂಶುದ್ದೀನ್ ಇನ್ನೂಳಿದ ಅಧಿಕಾರಿಳದ್ದೇ ದರ್ಬಾರ್ ಆಗಿದೆ ಎಂದು ಇಲ್ಲಿನ ಸ್ಥಳೀಯರು ಹಾಗೂ ಬಹುಜನ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ನರಸಣ್ಣಗೌಡ ಬಿ.ಗಣೇಕಲ್ ಆರೋಪಿಸಿದ್ದಾರೆ…

ಮೊದಲು ಹಿರೇಬೂದುರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಯಾಗಿತ್ತು, ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟಿದ್ದ ಮದರಕಲ್ ಗ್ರಾಮವೂ ಶಾವಂತಗೇರಾ ಗ್ರಾಮ ಪಂಚಾಯತಿಗೆ ಸೇರಿಸಿಕೊಂಡಿರುವ ಸಮಸ್ಯೆಯಿಂದ ಮದರಕಲ್ ಗ್ರಾಮದ ಪ್ರಭಾವಿ ಮುಖಂಡರು ಕೋರ್ಟ್ ಮೊರೆ ಹೋಗಿದ್ದರಿಂದ ಹೇಮನಾಳ ಮತ್ತು ಶಾವಂತಗೇರಾ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿರುವುದಿಲ್ಲ.

ಸದ್ಯ ಶಾವಂತಗೇರಾ ಗ್ರಾಮ ಪಂಚಾಯತಿ ಸಮಸ್ಯೆಗಳ ಆಗರವಾಗಿದೆ. ಅದರಲ್ಲಿ ಗ್ರಾಮ ಪಂಚಾಯತಿ ಇರುವುದು ಮೂಲಭೂತ ಸಮಸ್ಯೆಗಳಾದ ಬೆಳಕು, ನೀರು, ವಸತಿ ಪೂರೈಸಲು. ಆದರೆ, ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಚುನಾಯಿತ ಸದಸ್ಯರು ಇರಲಾರದಿಂದ “ಬೆಕ್ಕು ಇಲ್ಲದ ಮನೆಯಲ್ಲಿ ಇಲಿಚಾಮಟ ಲಾಗ ಹೊಡೆದಂತೆ” ಎಂಬ ಗಾದೆಯಂತೆ ಇಒ ಮತ್ತು ಪಿಡಿಒಗಳ ಚೆಲ್ಲಾಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023-24ನೇ ಸಾಲಿನಲ್ಲಿ ವಸತಿ ಯೋಜನೆ ಅಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 30, ಬಸವ 80, ಪಿಎಮ್ಆರ್ ವೈಯ್ 372 ಸಮೀಕ್ಷೆ ಪಟ್ಟಿಯಲ್ಲಿ ವಸತಿಗಳು ಮಂಜೂರಾಗಿವೆ. ಆದರೆ, ಅಭಿವೃದ್ಧಿ ಅಧಿಕಾರಿ ಶಂಶುದ್ಧೀನ್ ಅವರು ರಾಜಕೀಯ ವ್ಯಕ್ತಿಗಳ ಗುಲಾಮ ಅಥವಾ ಗುಮಾಸ್ತರಾಗಿ ಕೆಲಸ ಮಾಡಿ, ರಾಜಕೀಯ ಪ್ರಭಾವಿಗಳ ಸಂಬಂಧಕರಿಗೆ ಮನೆಗಳು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಳಿತಾಧಿಕಾರಿಯಾದ ಬಸವರಾಜ ಹಟ್ಟಿ ಮತ್ತು ಪಿಡಿಓ ಶಂಶುದ್ಧೀನ್ ಅವರು ಮನೆಗಳು ಹಾಕುತ್ತೇವೆಂದು 20 ಸಾವಿರದಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವಸೂಲಿ ಮಾಡಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಪಿಡಿಓ ಮತ್ತು ಇಓ ರವರು ಪಂಚಾಯತ್ ರಾಜ್ಯ ಕಾಯ್ದೆ 111 ಆಕ್ಟ್ ಪ್ರಕಾರ ಕಾರ್ಯನಿರ್ವಹಸುತ್ತಿಲ್ಲ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

26 minutes ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

1 hour ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

21 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

23 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

24 hours ago