Categories: ರಾಯಚೂರು

ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳದ್ದೇ ದರ್ಬಾರ್- ಸಾರ್ವಜನಿಕರ ಆಕ್ರೋಶ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ಹೆಸರಿಗೆ ಮಾತ್ರ. 2014-15 ರಲ್ಲಿ ಮರುವಿಂಗಡಣೆ ಪ್ರಕಾರ ಶಾವಂತಗೇರಾ ಗ್ರಾಮ ಪಂಚಾಯತಿಯಾಗಿದೆ.

ಈ ಪಂಚಾಯಿತಿಯಲ್ಲಿ ಆಡಳಿತ ಅಧಿಕಾರಿಯಾದ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಮತ್ತು ಪ್ರಭಾರಿ ಪಿಡಿಓ ಶಂಶುದ್ದೀನ್ ಇನ್ನೂಳಿದ ಅಧಿಕಾರಿಳದ್ದೇ ದರ್ಬಾರ್ ಆಗಿದೆ ಎಂದು ಇಲ್ಲಿನ ಸ್ಥಳೀಯರು ಹಾಗೂ ಬಹುಜನ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ನರಸಣ್ಣಗೌಡ ಬಿ.ಗಣೇಕಲ್ ಆರೋಪಿಸಿದ್ದಾರೆ…

ಮೊದಲು ಹಿರೇಬೂದುರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಯಾಗಿತ್ತು, ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟಿದ್ದ ಮದರಕಲ್ ಗ್ರಾಮವೂ ಶಾವಂತಗೇರಾ ಗ್ರಾಮ ಪಂಚಾಯತಿಗೆ ಸೇರಿಸಿಕೊಂಡಿರುವ ಸಮಸ್ಯೆಯಿಂದ ಮದರಕಲ್ ಗ್ರಾಮದ ಪ್ರಭಾವಿ ಮುಖಂಡರು ಕೋರ್ಟ್ ಮೊರೆ ಹೋಗಿದ್ದರಿಂದ ಹೇಮನಾಳ ಮತ್ತು ಶಾವಂತಗೇರಾ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿರುವುದಿಲ್ಲ.

ಸದ್ಯ ಶಾವಂತಗೇರಾ ಗ್ರಾಮ ಪಂಚಾಯತಿ ಸಮಸ್ಯೆಗಳ ಆಗರವಾಗಿದೆ. ಅದರಲ್ಲಿ ಗ್ರಾಮ ಪಂಚಾಯತಿ ಇರುವುದು ಮೂಲಭೂತ ಸಮಸ್ಯೆಗಳಾದ ಬೆಳಕು, ನೀರು, ವಸತಿ ಪೂರೈಸಲು. ಆದರೆ, ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಚುನಾಯಿತ ಸದಸ್ಯರು ಇರಲಾರದಿಂದ “ಬೆಕ್ಕು ಇಲ್ಲದ ಮನೆಯಲ್ಲಿ ಇಲಿಚಾಮಟ ಲಾಗ ಹೊಡೆದಂತೆ” ಎಂಬ ಗಾದೆಯಂತೆ ಇಒ ಮತ್ತು ಪಿಡಿಒಗಳ ಚೆಲ್ಲಾಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023-24ನೇ ಸಾಲಿನಲ್ಲಿ ವಸತಿ ಯೋಜನೆ ಅಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 30, ಬಸವ 80, ಪಿಎಮ್ಆರ್ ವೈಯ್ 372 ಸಮೀಕ್ಷೆ ಪಟ್ಟಿಯಲ್ಲಿ ವಸತಿಗಳು ಮಂಜೂರಾಗಿವೆ. ಆದರೆ, ಅಭಿವೃದ್ಧಿ ಅಧಿಕಾರಿ ಶಂಶುದ್ಧೀನ್ ಅವರು ರಾಜಕೀಯ ವ್ಯಕ್ತಿಗಳ ಗುಲಾಮ ಅಥವಾ ಗುಮಾಸ್ತರಾಗಿ ಕೆಲಸ ಮಾಡಿ, ರಾಜಕೀಯ ಪ್ರಭಾವಿಗಳ ಸಂಬಂಧಕರಿಗೆ ಮನೆಗಳು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಳಿತಾಧಿಕಾರಿಯಾದ ಬಸವರಾಜ ಹಟ್ಟಿ ಮತ್ತು ಪಿಡಿಓ ಶಂಶುದ್ಧೀನ್ ಅವರು ಮನೆಗಳು ಹಾಕುತ್ತೇವೆಂದು 20 ಸಾವಿರದಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವಸೂಲಿ ಮಾಡಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಪಿಡಿಓ ಮತ್ತು ಇಓ ರವರು ಪಂಚಾಯತ್ ರಾಜ್ಯ ಕಾಯ್ದೆ 111 ಆಕ್ಟ್ ಪ್ರಕಾರ ಕಾರ್ಯನಿರ್ವಹಸುತ್ತಿಲ್ಲ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

2 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

10 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

20 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

22 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago