Categories: ರಾಯಚೂರು

ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳದ್ದೇ ದರ್ಬಾರ್- ಸಾರ್ವಜನಿಕರ ಆಕ್ರೋಶ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯತಿ ಹೆಸರಿಗೆ ಮಾತ್ರ. 2014-15 ರಲ್ಲಿ ಮರುವಿಂಗಡಣೆ ಪ್ರಕಾರ ಶಾವಂತಗೇರಾ ಗ್ರಾಮ ಪಂಚಾಯತಿಯಾಗಿದೆ.

ಈ ಪಂಚಾಯಿತಿಯಲ್ಲಿ ಆಡಳಿತ ಅಧಿಕಾರಿಯಾದ ಬಸವರಾಜ ಹಟ್ಟಿ, ಎಡಿ ಅಣ್ಣರಾವ್, ಮತ್ತು ಪ್ರಭಾರಿ ಪಿಡಿಓ ಶಂಶುದ್ದೀನ್ ಇನ್ನೂಳಿದ ಅಧಿಕಾರಿಳದ್ದೇ ದರ್ಬಾರ್ ಆಗಿದೆ ಎಂದು ಇಲ್ಲಿನ ಸ್ಥಳೀಯರು ಹಾಗೂ ಬಹುಜನ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ನರಸಣ್ಣಗೌಡ ಬಿ.ಗಣೇಕಲ್ ಆರೋಪಿಸಿದ್ದಾರೆ…

ಮೊದಲು ಹಿರೇಬೂದುರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಯಾಗಿತ್ತು, ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟಿದ್ದ ಮದರಕಲ್ ಗ್ರಾಮವೂ ಶಾವಂತಗೇರಾ ಗ್ರಾಮ ಪಂಚಾಯತಿಗೆ ಸೇರಿಸಿಕೊಂಡಿರುವ ಸಮಸ್ಯೆಯಿಂದ ಮದರಕಲ್ ಗ್ರಾಮದ ಪ್ರಭಾವಿ ಮುಖಂಡರು ಕೋರ್ಟ್ ಮೊರೆ ಹೋಗಿದ್ದರಿಂದ ಹೇಮನಾಳ ಮತ್ತು ಶಾವಂತಗೇರಾ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿರುವುದಿಲ್ಲ.

ಸದ್ಯ ಶಾವಂತಗೇರಾ ಗ್ರಾಮ ಪಂಚಾಯತಿ ಸಮಸ್ಯೆಗಳ ಆಗರವಾಗಿದೆ. ಅದರಲ್ಲಿ ಗ್ರಾಮ ಪಂಚಾಯತಿ ಇರುವುದು ಮೂಲಭೂತ ಸಮಸ್ಯೆಗಳಾದ ಬೆಳಕು, ನೀರು, ವಸತಿ ಪೂರೈಸಲು. ಆದರೆ, ಶಾವಂತಗೇರಾ ಗ್ರಾಮ ಪಂಚಾಯತಿಯಲ್ಲಿ ಚುನಾಯಿತ ಸದಸ್ಯರು ಇರಲಾರದಿಂದ “ಬೆಕ್ಕು ಇಲ್ಲದ ಮನೆಯಲ್ಲಿ ಇಲಿಚಾಮಟ ಲಾಗ ಹೊಡೆದಂತೆ” ಎಂಬ ಗಾದೆಯಂತೆ ಇಒ ಮತ್ತು ಪಿಡಿಒಗಳ ಚೆಲ್ಲಾಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2023-24ನೇ ಸಾಲಿನಲ್ಲಿ ವಸತಿ ಯೋಜನೆ ಅಡಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 30, ಬಸವ 80, ಪಿಎಮ್ಆರ್ ವೈಯ್ 372 ಸಮೀಕ್ಷೆ ಪಟ್ಟಿಯಲ್ಲಿ ವಸತಿಗಳು ಮಂಜೂರಾಗಿವೆ. ಆದರೆ, ಅಭಿವೃದ್ಧಿ ಅಧಿಕಾರಿ ಶಂಶುದ್ಧೀನ್ ಅವರು ರಾಜಕೀಯ ವ್ಯಕ್ತಿಗಳ ಗುಲಾಮ ಅಥವಾ ಗುಮಾಸ್ತರಾಗಿ ಕೆಲಸ ಮಾಡಿ, ರಾಜಕೀಯ ಪ್ರಭಾವಿಗಳ ಸಂಬಂಧಕರಿಗೆ ಮನೆಗಳು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಳಿತಾಧಿಕಾರಿಯಾದ ಬಸವರಾಜ ಹಟ್ಟಿ ಮತ್ತು ಪಿಡಿಓ ಶಂಶುದ್ಧೀನ್ ಅವರು ಮನೆಗಳು ಹಾಕುತ್ತೇವೆಂದು 20 ಸಾವಿರದಿಂದ 30 ಸಾವಿರ ರೂಪಾಯಿಗಳವರೆಗೆ ಹಣ ವಸೂಲಿ ಮಾಡಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಪಿಡಿಓ ಮತ್ತು ಇಓ ರವರು ಪಂಚಾಯತ್ ರಾಜ್ಯ ಕಾಯ್ದೆ 111 ಆಕ್ಟ್ ಪ್ರಕಾರ ಕಾರ್ಯನಿರ್ವಹಸುತ್ತಿಲ್ಲ. ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago