Categories: ಕೋಲಾರ

ಶಾಸಕರು, ಎಂಎಲ್ಸಿಗಳ ಬಗ್ಗೆ ಮಾತಾಡುವ ನೈತಿಕತೆ ನಿಮಗಿಲ್ಲ ಸಿಎಂಆರ್ ಶ್ರೀನಾಥ್ ವಿರುದ್ದ ಮೈಲಾಂಡಹಳ್ಳಿ ಮುರಳಿ ತಿರುಗೇಟು

ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಬಗ್ಗೆ ಮಾತಾಡುವ ಬರದಲ್ಲಿ ಶಾಸಕರಿಗೆ ಎಂಎಲ್ಸಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ ದರ್ಪ ಅಹಂಕಾರದಿಂದ ಸೋಲಾಗಿದೆ ಎಂದು ಹೇಳುವ ನೈತಿಕತೆ ನಿಮಗೆ ಇಲ್ಲ ಎಂದು ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ವಿರುದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಶಾಸಕರಿಗೆ ದರ್ಪ ಮತ್ತು ಅಹಂಕಾರ ಇದ್ದೀದ್ದರೆ ಇಪ್ಪತ್ತು ದಿನದಲ್ಲಿ ಕೋಲಾರಕ್ಕೆ ಬಂದು ಶಾಸಕರಾಗುತ್ತಿರಲಿಲ್ಲ ಕಳೆದ 2023 ರ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಮಾರು 83ಸಾವಿರ ದಷ್ಟು ಮತಗಳನ್ನು ನೀಡಿ ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷದ ಶಾಸಕರನ್ನು‌ ಆಯ್ಕೆ ಮಾಡಿದ್ದಾರೆ ಯಾವುದೇ ಸುಳ್ಳು ಆಶ್ವಾಸನೆಗಳನ್ನು ನೀಡಿ‌ ಶಾಸಕರಾಗಿಲ್ಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಹ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿಯೇ ಸುಮಾರು ಐದು ಸಾವಿರಕ್ಕೂ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಡಿಸುವಲ್ಲಿ ಶಾಸಕರು ಮತ್ತು ಎಂಎಲ್ಸಿ ಗಳ ಪಾತ್ರ ಬಹುಮುಖ್ಯವಾಗಿದೆ ಮೈತ್ರಿ ಅಭ್ಯರ್ಥಿಯಾಗಿ ನಿಮ್ಮ ಕೊಡುಗೆ ಏನು ಎಂಬುದನ್ನು ಮೊದಲು ವಿಮರ್ಶೆ ಮಾಡಿಕೊಳ್ಳಿ ಅದು ಬಿಟ್ಟು ಕಾಂಗ್ರೆಸ್ ಜನಪ್ರತಿನಿಧಿಗಳ ಬಗ್ಗೆ ಮಾತಾಡಲು ನಿಮಗೆ ನೈತಿಕತೆ ಇಲ್ಲ ಮಾತಾಡಿದಷ್ಟು ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳಬೇಕಾಗುತ್ತದೆ ಎಂದರು.

ಸಿಎಂಆರ್ ಶ್ರೀನಾಥ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾಗಲಿದ್ದಾರೆ ಎಂಬುದನ್ನು ನಿಮ್ಮದೇ ಪಕ್ಷದ ಕಾರ್ಯಕರ್ತರಿಗೆ ಗೊಂದಲವಾಗಿದೆ ಕೇವಲ ಇಪ್ಪತ್ತು ದಿನಗಳಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದು ತೋರಿಸಿದವರಿಗೆ ನಿಮ್ಮ ಸಲಹೆ ಸೂಚನೆಗಳು ಅವಶ್ಯಕತೆ ಇಲ್ಲ ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಮಾಡಲು ಶಾಸಕರು ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರು ಪಣ ತೊಟ್ಟಿದ್ದಾರೆ ಸಾರ್ವಜನಿಕ ಜೀವನದಲ್ಲಿ ಯಾರ ಬಗ್ಗೆಯೂ ಹಗುರವಾಗಿ ಮಾತನಾಡಬಾರದು ಎಂದು ಕಿವಿ ಮಾತು ಹೇಳಿದರು

ಈ ಬಾರಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ದೇಶದ ಚುನಾವಣೆ ಅದರಲ್ಲೂ ವಿಶೇಷವಾಗಿ ನರೇಂದ್ರ ಮೋದಿ ಮತ್ತು ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ಮುಖ ನೋಡಿ ಜೊತೆಗೆ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ ಅಂತ ಅನುಕಂಪದಿಂದ ಮತ ಹಾಕಿದ್ದಾರೆ ಹೊರತು ನಿಮ್ಮ ಮೈತ್ರಿ ಅಭ್ಯರ್ಥಿ ಅಥವಾ ಜೆಡಿಎಸ್‌ ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ಮುಖ ನೋಡಿ ಯಾರು ಮತ ಹಾಕಿಲ್ಲ ಕಳೆದ ಬಾರಿಗಿಂತ ಸುಮಾರು ೧.೫೦ ದಷ್ಟು ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆದಿದ್ದಾರೆ ಕಳೆದ ಬಾರಿಯ ನಿಮ್ಮ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ನೀವು ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳಲು ಹೊರಟಿದ್ದು ವಿಪರ್ಯಾಸವಾಗಿದೆ ಎಂದರು.

ರಾಜ್ಯದಲ್ಲಿ ಕಳೆದ ಬಾರಿ ಜೆಡಿಎಸ್‌ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡು ಕೇವಲ ಒಂದು ಸ್ಥಾನವನ್ನು ಪಡೆದಿದ್ದೇವೆ ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ ಇದು ರಾಜ್ಯದ ಕಾಂಗ್ರೆಸ್ ಸರಕಾರದ ಬಗ್ಗೆ ಮತದಾರಿಗೆ ಇರುವ ಒಲವು ಎನು ಎಂಬುದನ್ನು ತೋರಿಸುತ್ತದೆ ದೇಶದಲ್ಲಿ ಕೂಡ ಬಿಜೆಪಿ ಬಗ್ಗೆ ಮತದಾರರ ಒಲವು ಇಲ್ಲ ಎಂಬುದನ್ನು ಚುನಾವಣೆಯಲ್ಲಿ ನಿರೂಪಿಸಿದ್ದಾರೆ ಯಾರೇ ಆಗಲಿ ಯಾರನ್ನೇ ಆಗಲಿ ಮಾತಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಿಎಂಆರ್ ಶ್ರೀನಾಥ್ ಅವರಿಗೆ ಮೈಲಾಂಡಹಳ್ಳಿ ಮುರಳಿ ಎಚ್ಚರಿಕೆ ನೀಡಿದರು

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

15 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

15 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 days ago