Categories: ಕೋಲಾರ

ಶಾಸಕರು, ಎಂಎಲ್ಸಿಗಳ ಬಗ್ಗೆ ಮಾತಾಡುವ ನೈತಿಕತೆ ನಿಮಗಿಲ್ಲ ಸಿಎಂಆರ್ ಶ್ರೀನಾಥ್ ವಿರುದ್ದ ಮೈಲಾಂಡಹಳ್ಳಿ ಮುರಳಿ ತಿರುಗೇಟು

ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಬಗ್ಗೆ ಮಾತಾಡುವ ಬರದಲ್ಲಿ ಶಾಸಕರಿಗೆ ಎಂಎಲ್ಸಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ ದರ್ಪ ಅಹಂಕಾರದಿಂದ ಸೋಲಾಗಿದೆ ಎಂದು ಹೇಳುವ ನೈತಿಕತೆ ನಿಮಗೆ ಇಲ್ಲ ಎಂದು ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ವಿರುದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಶಾಸಕರಿಗೆ ದರ್ಪ ಮತ್ತು ಅಹಂಕಾರ ಇದ್ದೀದ್ದರೆ ಇಪ್ಪತ್ತು ದಿನದಲ್ಲಿ ಕೋಲಾರಕ್ಕೆ ಬಂದು ಶಾಸಕರಾಗುತ್ತಿರಲಿಲ್ಲ ಕಳೆದ 2023 ರ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಮಾರು 83ಸಾವಿರ ದಷ್ಟು ಮತಗಳನ್ನು ನೀಡಿ ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷದ ಶಾಸಕರನ್ನು‌ ಆಯ್ಕೆ ಮಾಡಿದ್ದಾರೆ ಯಾವುದೇ ಸುಳ್ಳು ಆಶ್ವಾಸನೆಗಳನ್ನು ನೀಡಿ‌ ಶಾಸಕರಾಗಿಲ್ಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಹ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿಯೇ ಸುಮಾರು ಐದು ಸಾವಿರಕ್ಕೂ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಡಿಸುವಲ್ಲಿ ಶಾಸಕರು ಮತ್ತು ಎಂಎಲ್ಸಿ ಗಳ ಪಾತ್ರ ಬಹುಮುಖ್ಯವಾಗಿದೆ ಮೈತ್ರಿ ಅಭ್ಯರ್ಥಿಯಾಗಿ ನಿಮ್ಮ ಕೊಡುಗೆ ಏನು ಎಂಬುದನ್ನು ಮೊದಲು ವಿಮರ್ಶೆ ಮಾಡಿಕೊಳ್ಳಿ ಅದು ಬಿಟ್ಟು ಕಾಂಗ್ರೆಸ್ ಜನಪ್ರತಿನಿಧಿಗಳ ಬಗ್ಗೆ ಮಾತಾಡಲು ನಿಮಗೆ ನೈತಿಕತೆ ಇಲ್ಲ ಮಾತಾಡಿದಷ್ಟು ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳಬೇಕಾಗುತ್ತದೆ ಎಂದರು.

ಸಿಎಂಆರ್ ಶ್ರೀನಾಥ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾಗಲಿದ್ದಾರೆ ಎಂಬುದನ್ನು ನಿಮ್ಮದೇ ಪಕ್ಷದ ಕಾರ್ಯಕರ್ತರಿಗೆ ಗೊಂದಲವಾಗಿದೆ ಕೇವಲ ಇಪ್ಪತ್ತು ದಿನಗಳಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದು ತೋರಿಸಿದವರಿಗೆ ನಿಮ್ಮ ಸಲಹೆ ಸೂಚನೆಗಳು ಅವಶ್ಯಕತೆ ಇಲ್ಲ ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಮಾಡಲು ಶಾಸಕರು ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರು ಪಣ ತೊಟ್ಟಿದ್ದಾರೆ ಸಾರ್ವಜನಿಕ ಜೀವನದಲ್ಲಿ ಯಾರ ಬಗ್ಗೆಯೂ ಹಗುರವಾಗಿ ಮಾತನಾಡಬಾರದು ಎಂದು ಕಿವಿ ಮಾತು ಹೇಳಿದರು

ಈ ಬಾರಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ದೇಶದ ಚುನಾವಣೆ ಅದರಲ್ಲೂ ವಿಶೇಷವಾಗಿ ನರೇಂದ್ರ ಮೋದಿ ಮತ್ತು ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ಮುಖ ನೋಡಿ ಜೊತೆಗೆ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ ಅಂತ ಅನುಕಂಪದಿಂದ ಮತ ಹಾಕಿದ್ದಾರೆ ಹೊರತು ನಿಮ್ಮ ಮೈತ್ರಿ ಅಭ್ಯರ್ಥಿ ಅಥವಾ ಜೆಡಿಎಸ್‌ ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ಮುಖ ನೋಡಿ ಯಾರು ಮತ ಹಾಕಿಲ್ಲ ಕಳೆದ ಬಾರಿಗಿಂತ ಸುಮಾರು ೧.೫೦ ದಷ್ಟು ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆದಿದ್ದಾರೆ ಕಳೆದ ಬಾರಿಯ ನಿಮ್ಮ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ನೀವು ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳಲು ಹೊರಟಿದ್ದು ವಿಪರ್ಯಾಸವಾಗಿದೆ ಎಂದರು.

ರಾಜ್ಯದಲ್ಲಿ ಕಳೆದ ಬಾರಿ ಜೆಡಿಎಸ್‌ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡು ಕೇವಲ ಒಂದು ಸ್ಥಾನವನ್ನು ಪಡೆದಿದ್ದೇವೆ ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ ಇದು ರಾಜ್ಯದ ಕಾಂಗ್ರೆಸ್ ಸರಕಾರದ ಬಗ್ಗೆ ಮತದಾರಿಗೆ ಇರುವ ಒಲವು ಎನು ಎಂಬುದನ್ನು ತೋರಿಸುತ್ತದೆ ದೇಶದಲ್ಲಿ ಕೂಡ ಬಿಜೆಪಿ ಬಗ್ಗೆ ಮತದಾರರ ಒಲವು ಇಲ್ಲ ಎಂಬುದನ್ನು ಚುನಾವಣೆಯಲ್ಲಿ ನಿರೂಪಿಸಿದ್ದಾರೆ ಯಾರೇ ಆಗಲಿ ಯಾರನ್ನೇ ಆಗಲಿ ಮಾತಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಿಎಂಆರ್ ಶ್ರೀನಾಥ್ ಅವರಿಗೆ ಮೈಲಾಂಡಹಳ್ಳಿ ಮುರಳಿ ಎಚ್ಚರಿಕೆ ನೀಡಿದರು

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago