ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ. ನಮ್ಮ ಪಕ್ಷದಲ್ಲಿ ಫಾರ್ಮಾನು ಹೊರಡಿಸಲು ಹೈಕಮಾಂಡ್ ಇದ್ದಾರೆ. ನಿವೇನು ನಮಗೆ ಪಾಠ ಹೇಳೋದಕ್ಕೆ ಬರಬೇಡಿ. ತಾಲೂಕಿನ ಅಭಿವೃದ್ಧಿ ಕಡೆಗೆ ಗಮನ ಕೊಡಿ ಸಾಕು ಎಂದು ಪರೋಕ್ಷವಾಗಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಗುಡುಗಿದರು.
ನಮ್ಮ ಪಕ್ಷದ ಆತಂರಿಕ ವಿಷಯ ಬೇಡ ಶಾಸಕರೇ ನಿಮಗೆ. ನಮ್ಮ ತಾಲೂಕಿನ ಆಡಳಿತ ಯಂತ್ರ ಅಂದರೆ ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯ ಆಡಳಿತ ವ್ಯವಸ್ಥೆ ಪರಿಶೀಲಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬಂದಿದ್ದರು. ಸಚಿವರು ಬಂದು ತಾಲೂಕಿನ ಆಡಳಿತ ಬಗ್ಗೆ ಗಮನಿಸಿದ್ದಾರೆ. ತಾಲೂಕಿನಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ. ಸಚಿವರು ಬಂದು ತಾಲೂಕಿನ ಆಡಳಿತ ಯಂತ್ರದ ಬಗ್ಗೆ ಗಮನಿಸಬೇಕಾ…? ಶಾಸಕರು ಏನು ಮಾಡುತ್ತಿದ್ದಾರೆ…? ತಾಲೂಕಿನ ಆಡಳಿತ ಯಂತ್ರ ಕುಸಿದಿದೆ….. ಇದು ತಾಲೂಕಿನ ದೌರ್ಭಾಗ್ಯ… ಎಂದು ಕಿಡಿಕಾರಿದ್ದಾರೆ.
ರೈತರಿಗೆ ಸಾಗುವಳಿ ಚೀಟಿ ಸಿಗುತ್ತಿಲ್ಲ. ತಾಲೂಕು ಆಫೀಸ್ ನಲ್ಲಿ ಸಾಗುವಳಿ ಚೀಟಿ ಪಡೆಯಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ… ನಿಜವಾದ ರೈತರು ಬೋರ್ ವೆಲ್ ಭಾಗ್ಯ ಸಿಗುತ್ತಿಲ್ಲ. ತಾಲೂಕಿನ ಆಡಳಿತ ವ್ಯವಸ್ಥೆ ಬಗ್ಗೆ ಮಾಜಿ ಶಾಸಕರನ್ನ, ಸಾರ್ವಜನಿಕರನ್ನ ಕೇಳೋದಕ್ಕೆ ಆಗುತ್ತಾ…..? ತಾಲೂಕಿನ ಸಂಪೂರ್ಣ ಜವಾಬ್ದಾರಿ ಶಾಸಕರ ಮೇಲೆ ಇರುತ್ತದೆ. ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಶಾಸಕರ ಗಮನಕ್ಕೆ ಬರುವುದಿಲ್ಲವೇ…? ಭ್ರಷ್ಟ, ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಮಾನ್ಯ ಶಾಸಕಕರೇ ನಿವುನ್ನೂ ರಾಜಕೀಯಕ್ಕೆ ಹೊಸಬರು. ಇನ್ನೂ ಮೂರು ವರ್ಷವಿದೆ ಇನ್ನಾದರೂ ತಾಲೂಕನ್ನು ಅಭಿವೃದ್ಧಿ ಮಾಡುವುದಕ್ಕೆ ಶ್ರಮಿಸಿ ಎಂದು ಹೇಳಿದರು.
ಎಂಪಿ ಚುನಾವಣೆಯಲ್ಲಿ ನಾವೇನು ಕಾಂಗ್ರೆಸ್ ಗೆ ಸರ್ಪೋಟ್ ಮಾಡಿದ್ವಾ…? ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ನಾನು ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಮಾತನಾಡಿದ ಅವರು, ಅದು ವದಂತಿಯಾಗಿಯೇ ಉಳಿಯಲಿ ಎಂದು ಹೇಳಿದರು.
ಅದೇರೀತಿ 2028ರ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸುವುದು ಶತಸಿದ್ಧ ಎಂದು ಎಸ್.ಎಂ. ಹರೀಶ್ ಗೌಡರು ಘೋಷಣೆ ಮಾಡಿದ್ದು, ಚುನಾವಣಿಗೆ ಇನ್ನೂ 3 ವರ್ಷಗಳಿದ್ದು ಈಗಿನಿಂದಲೇ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…