ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಕಿಡಿ

ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ. ನಮ್ಮ ಪಕ್ಷದಲ್ಲಿ ಫಾರ್ಮಾನು ಹೊರಡಿಸಲು ಹೈಕಮಾಂಡ್ ಇದ್ದಾರೆ. ನಿವೇನು ನಮಗೆ ಪಾಠ ಹೇಳೋದಕ್ಕೆ ಬರಬೇಡಿ. ತಾಲೂಕಿನ ಅಭಿವೃದ್ಧಿ ಕಡೆಗೆ ಗಮನ ಕೊಡಿ ಸಾಕು ಎಂದು ಪರೋಕ್ಷವಾಗಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಗುಡುಗಿದರು.

ನಮ್ಮ ಪಕ್ಷದ ಆತಂರಿಕ ವಿಷಯ ಬೇಡ ಶಾಸಕರೇ ನಿಮಗೆ. ನಮ್ಮ ತಾಲೂಕಿನ ಆಡಳಿತ ಯಂತ್ರ ಅಂದರೆ ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯ ಆಡಳಿತ ವ್ಯವಸ್ಥೆ ಪರಿಶೀಲಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬಂದಿದ್ದರು. ಸಚಿವರು ಬಂದು ತಾಲೂಕಿನ ಆಡಳಿತ ಬಗ್ಗೆ ಗಮನಿಸಿದ್ದಾರೆ. ತಾಲೂಕಿನಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ. ಸಚಿವರು ಬಂದು ತಾಲೂಕಿನ ಆಡಳಿತ ಯಂತ್ರದ ಬಗ್ಗೆ ಗಮನಿಸಬೇಕಾ…? ಶಾಸಕರು ಏನು ಮಾಡುತ್ತಿದ್ದಾರೆ…? ತಾಲೂಕಿನ ಆಡಳಿತ ಯಂತ್ರ ಕುಸಿದಿದೆ….. ಇದು ತಾಲೂಕಿನ ದೌರ್ಭಾಗ್ಯ… ಎಂದು ಕಿಡಿಕಾರಿದ್ದಾರೆ.

ರೈತರಿಗೆ ಸಾಗುವಳಿ ಚೀಟಿ ಸಿಗುತ್ತಿಲ್ಲ. ತಾಲೂಕು ಆಫೀಸ್ ನಲ್ಲಿ ಸಾಗುವಳಿ ಚೀಟಿ ಪಡೆಯಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ… ನಿಜವಾದ ರೈತರು ಬೋರ್ ವೆಲ್ ಭಾಗ್ಯ ಸಿಗುತ್ತಿಲ್ಲ. ತಾಲೂಕಿನ ಆಡಳಿತ ವ್ಯವಸ್ಥೆ ಬಗ್ಗೆ ಮಾಜಿ ಶಾಸಕರನ್ನ, ಸಾರ್ವಜನಿಕರನ್ನ ಕೇಳೋದಕ್ಕೆ ಆಗುತ್ತಾ…..? ತಾಲೂಕಿನ‌ ಸಂಪೂರ್ಣ ಜವಾಬ್ದಾರಿ ಶಾಸಕರ ಮೇಲೆ ಇರುತ್ತದೆ. ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಶಾಸಕರ ಗಮನಕ್ಕೆ ಬರುವುದಿಲ್ಲವೇ…? ಭ್ರಷ್ಟ, ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಮಾನ್ಯ ಶಾಸಕಕರೇ ನಿವುನ್ನೂ ರಾಜಕೀಯಕ್ಕೆ ಹೊಸಬರು. ಇನ್ನೂ ಮೂರು ವರ್ಷವಿದೆ ಇನ್ನಾದರೂ ತಾಲೂಕನ್ನು ಅಭಿವೃದ್ಧಿ ಮಾಡುವುದಕ್ಕೆ ಶ್ರಮಿಸಿ ಎಂದು ಹೇಳಿದರು.

ಎಂಪಿ ಚುನಾವಣೆಯಲ್ಲಿ ನಾವೇನು ಕಾಂಗ್ರೆಸ್ ಗೆ ಸರ್ಪೋಟ್ ಮಾಡಿದ್ವಾ…? ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ನಾನು ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಮಾತನಾಡಿದ ಅವರು, ಅದು ವದಂತಿಯಾಗಿಯೇ ಉಳಿಯಲಿ ಎಂದು ಹೇಳಿದರು.

ಅದೇರೀತಿ 2028ರ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸುವುದು ಶತಸಿದ್ಧ ಎಂದು ಎಸ್.ಎಂ. ಹರೀಶ್ ಗೌಡರು ಘೋಷಣೆ ಮಾಡಿದ್ದು, ಚುನಾವಣಿಗೆ ಇನ್ನೂ 3 ವರ್ಷಗಳಿದ್ದು ಈಗಿನಿಂದಲೇ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago