ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಕಿಡಿ

ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ. ನಮ್ಮ ಪಕ್ಷದಲ್ಲಿ ಫಾರ್ಮಾನು ಹೊರಡಿಸಲು ಹೈಕಮಾಂಡ್ ಇದ್ದಾರೆ. ನಿವೇನು ನಮಗೆ ಪಾಠ ಹೇಳೋದಕ್ಕೆ ಬರಬೇಡಿ. ತಾಲೂಕಿನ ಅಭಿವೃದ್ಧಿ ಕಡೆಗೆ ಗಮನ ಕೊಡಿ ಸಾಕು ಎಂದು ಪರೋಕ್ಷವಾಗಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಗುಡುಗಿದರು.

ನಮ್ಮ ಪಕ್ಷದ ಆತಂರಿಕ ವಿಷಯ ಬೇಡ ಶಾಸಕರೇ ನಿಮಗೆ. ನಮ್ಮ ತಾಲೂಕಿನ ಆಡಳಿತ ಯಂತ್ರ ಅಂದರೆ ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯ ಆಡಳಿತ ವ್ಯವಸ್ಥೆ ಪರಿಶೀಲಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬಂದಿದ್ದರು. ಸಚಿವರು ಬಂದು ತಾಲೂಕಿನ ಆಡಳಿತ ಬಗ್ಗೆ ಗಮನಿಸಿದ್ದಾರೆ. ತಾಲೂಕಿನಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ. ಸಚಿವರು ಬಂದು ತಾಲೂಕಿನ ಆಡಳಿತ ಯಂತ್ರದ ಬಗ್ಗೆ ಗಮನಿಸಬೇಕಾ…? ಶಾಸಕರು ಏನು ಮಾಡುತ್ತಿದ್ದಾರೆ…? ತಾಲೂಕಿನ ಆಡಳಿತ ಯಂತ್ರ ಕುಸಿದಿದೆ….. ಇದು ತಾಲೂಕಿನ ದೌರ್ಭಾಗ್ಯ… ಎಂದು ಕಿಡಿಕಾರಿದ್ದಾರೆ.

ರೈತರಿಗೆ ಸಾಗುವಳಿ ಚೀಟಿ ಸಿಗುತ್ತಿಲ್ಲ. ತಾಲೂಕು ಆಫೀಸ್ ನಲ್ಲಿ ಸಾಗುವಳಿ ಚೀಟಿ ಪಡೆಯಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ… ನಿಜವಾದ ರೈತರು ಬೋರ್ ವೆಲ್ ಭಾಗ್ಯ ಸಿಗುತ್ತಿಲ್ಲ. ತಾಲೂಕಿನ ಆಡಳಿತ ವ್ಯವಸ್ಥೆ ಬಗ್ಗೆ ಮಾಜಿ ಶಾಸಕರನ್ನ, ಸಾರ್ವಜನಿಕರನ್ನ ಕೇಳೋದಕ್ಕೆ ಆಗುತ್ತಾ…..? ತಾಲೂಕಿನ‌ ಸಂಪೂರ್ಣ ಜವಾಬ್ದಾರಿ ಶಾಸಕರ ಮೇಲೆ ಇರುತ್ತದೆ. ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಶಾಸಕರ ಗಮನಕ್ಕೆ ಬರುವುದಿಲ್ಲವೇ…? ಭ್ರಷ್ಟ, ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಮಾನ್ಯ ಶಾಸಕಕರೇ ನಿವುನ್ನೂ ರಾಜಕೀಯಕ್ಕೆ ಹೊಸಬರು. ಇನ್ನೂ ಮೂರು ವರ್ಷವಿದೆ ಇನ್ನಾದರೂ ತಾಲೂಕನ್ನು ಅಭಿವೃದ್ಧಿ ಮಾಡುವುದಕ್ಕೆ ಶ್ರಮಿಸಿ ಎಂದು ಹೇಳಿದರು.

ಎಂಪಿ ಚುನಾವಣೆಯಲ್ಲಿ ನಾವೇನು ಕಾಂಗ್ರೆಸ್ ಗೆ ಸರ್ಪೋಟ್ ಮಾಡಿದ್ವಾ…? ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ನಾನು ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಮಾತನಾಡಿದ ಅವರು, ಅದು ವದಂತಿಯಾಗಿಯೇ ಉಳಿಯಲಿ ಎಂದು ಹೇಳಿದರು.

ಅದೇರೀತಿ 2028ರ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸುವುದು ಶತಸಿದ್ಧ ಎಂದು ಎಸ್.ಎಂ. ಹರೀಶ್ ಗೌಡರು ಘೋಷಣೆ ಮಾಡಿದ್ದು, ಚುನಾವಣಿಗೆ ಇನ್ನೂ 3 ವರ್ಷಗಳಿದ್ದು ಈಗಿನಿಂದಲೇ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

16 minutes ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 hour ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

19 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

19 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago