ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದ ಸರ್ವೇ ನಂಬರ್ 59 ರಲ್ಲಿ 7 ಎಕರೆ ಜಮೀನಿನಲ್ಲಿ ಆಶ್ರಯ ಯೋಜನೆಯಡಿ ಸುಮಾರು 90ಕ್ಕೂ ಹೆಚ್ಚು ನಿವೇಶನಗಳನ್ನು ನಮ್ಮ ಊರಿನವರಿಗೆ ಬಿಟ್ಟು ಬೇರೆ ಊರಿನವರಿಗೆ ಹಂಚಿಕೆ ಮಾಡಲಾಗಿದೆ ಎಂದು ಮಲ್ಲೋಹಳ್ಳಿ ಗ್ರಾಮದ ನಿವಾಸಿಗಳು ಆರೋಪಿಸಿದ್ದಾರೆ.
ನಮ್ಮ ಊರಿನಲ್ಲೇ ಸುಮಾರು 100ಕ್ಕೂ ಹೆಚ್ಚು ನಿವಾಶನ ರಹಿತರು ಇದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಮೊದಲು ನಮಗೆ ಆದ್ಯತೆ ನೀಡದೇ, ಶಾಕರ ಗಮನಕ್ಕೂ ತರದೇ ಬೇರೆ ಊರಿನವರಿಗೆ ಆದ್ಯತೆ ನೀಡಿ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಊರಿನ ವ್ಯಾಪ್ತಿಯ ಗೋಮಾಳದಲ್ಲಿ ಬೇರೆ ಊರಿನವರಿಗೆ ನಿವೇಶ ಹಂಚಿಕೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ. ಈ ಆದೇಶವನ್ನು ಮೊದಲು ಹಿಂಪಡೆದು ನಮ್ಮ ಊರಿನ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಸರ್ಕಾರದ ಆದೇಶ ಮೇರೆಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಗ್ರಾಮಗಳಲ್ಲಿ ಯಾರು ನಿವೇಶನ ರಹಿತರು ಇದ್ದಾರೆ ಅಂತವರನ್ನು ಗುರುತಿಸಿ, ಪಟ್ಟಿ ಮಾಡಿ, ಅರ್ಜಿಗಳಲ್ಲಿ ಪಡೆದು ಹಂಚಿಕೆ ಮಾಡಿದ್ದೇವೆ ಎಂದರು.
ಈ ಕುರಿತು ಈಗ ಮಲ್ಲೋಹಳ್ಳಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ನಾವು ಯಾವುದೇ ರೀತಿಯಾಗಿ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆ ಮಾಡಿಲ್ಲ. ಸರ್ಕಾರದ ನಿಯಮಗಳನ್ನು ಪಾಲಿಸಿದ್ದೇವೆ. ಒಂದು ವೇಳೆ ಇನ್ನೂ ಆಕ್ಷೇಪಣೆ ಇದ್ದಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಿಕೊಳ್ಳಬಹುದು ಎಂದರು.
ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…