ಶಾಸಕರ ಗಮನಕ್ಕೂ ಬಾರದೇ, ನಿವೇಶನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಗ್ರಾಮ ಪಂಚಾಯಿತಿ ಎದುರು ಮಲ್ಲೋಹಳ್ಳಿ ಗ್ರಾಮಸ್ಥರ ಆಕ್ರೋಶ

ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೋಹಳ್ಳಿ ಗ್ರಾಮದ ಸರ್ವೇ ನಂಬರ್ 59 ರಲ್ಲಿ 7 ಎಕರೆ ಜಮೀನಿನಲ್ಲಿ ಆಶ್ರಯ ಯೋಜನೆಯಡಿ ಸುಮಾರು 90ಕ್ಕೂ ಹೆಚ್ಚು ನಿವೇಶನಗಳನ್ನು ನಮ್ಮ ಊರಿನವರಿಗೆ ಬಿಟ್ಟು ಬೇರೆ ಊರಿನವರಿಗೆ ಹಂಚಿಕೆ ಮಾಡಲಾಗಿದೆ ಎಂದು ಮಲ್ಲೋಹಳ್ಳಿ ಗ್ರಾಮದ ನಿವಾಸಿಗಳು ಆರೋಪಿಸಿದ್ದಾರೆ.

ನಮ್ಮ ಊರಿನಲ್ಲೇ ಸುಮಾರು 100ಕ್ಕೂ ಹೆಚ್ಚು ನಿವಾಶನ ರಹಿತರು ಇದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಮೊದಲು ನಮಗೆ ಆದ್ಯತೆ ನೀಡದೇ, ಶಾಕರ ಗಮನಕ್ಕೂ ತರದೇ ಬೇರೆ ಊರಿನವರಿಗೆ ಆದ್ಯತೆ ನೀಡಿ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಊರಿನ ವ್ಯಾಪ್ತಿಯ ಗೋಮಾಳದಲ್ಲಿ ಬೇರೆ ಊರಿನವರಿಗೆ ನಿವೇಶ ಹಂಚಿಕೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ. ಈ ಆದೇಶವನ್ನು ಮೊದಲು ಹಿಂಪಡೆದು ನಮ್ಮ ಊರಿನ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಸರ್ಕಾರದ ಆದೇಶ ಮೇರೆಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಗ್ರಾಮಗಳಲ್ಲಿ ಯಾರು ನಿವೇಶನ ರಹಿತರು ಇದ್ದಾರೆ ಅಂತವರನ್ನು ಗುರುತಿಸಿ, ಪಟ್ಟಿ ಮಾಡಿ, ಅರ್ಜಿಗಳಲ್ಲಿ ಪಡೆದು ಹಂಚಿಕೆ ಮಾಡಿದ್ದೇವೆ ಎಂದರು.

ಈ ಕುರಿತು ಈಗ ಮಲ್ಲೋಹಳ್ಳಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ನಾವು ಯಾವುದೇ ರೀತಿಯಾಗಿ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆ ಮಾಡಿಲ್ಲ. ಸರ್ಕಾರದ ನಿಯಮಗಳನ್ನು ಪಾಲಿಸಿದ್ದೇವೆ. ಒಂದು ವೇಳೆ ಇನ್ನೂ ಆಕ್ಷೇಪಣೆ ಇದ್ದಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಿಕೊಳ್ಳಬಹುದು ಎಂದರು.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

10 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

10 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

10 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

15 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

21 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

21 hours ago