ಶಾಸಕರ ನೇತೃತ್ವದಲ್ಲಿ ವಿಜೇತ ಸರ್ಕಾರಿ ನೌಕರರಿಗೆ ಅಭಿನಂದನೆ: ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿಯಾಗಿದೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ‌ಯಿದ್ದು ಒಳಿದ ಸಿಬ್ಬಂದಿ ಮೇಲೆ ಒತ್ತಡ ಉಂಟಾಗುತ್ತಿರುವುದು ನಿಜ.‌ ಮುಂದಿನ ದಿನಗಳಲ್ಲಿ ಭರ್ತಿಗೆ ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್‌ ಭರವಸೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ನೂತನ ನಿರ್ದೇಶಕರಿಗೆ ನಗರ ಹೊರವಲಯದಲ್ಲಿರುವ ತಮ್ಮ ಅತಿಥಿಗೃಹದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಭಿನಂದನೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಜಿಲ್ಲೆಯ ಹಾಗೂ ತಾಲ್ಲೂಕಿನಲ್ಲಿ ಭಾರಿ ಬದಲಾವಣೆ ಆಗಬೇಕಿದೆ. ಕೋಲಾರಕ್ಕೆ ವೈದ್ಯಕೀಯ ಕಾಲೇಜು ಸಿಕ್ಕಿದ್ದು, ಅದನ್ನು ಉತ್ತಮವಾಗಿ ಹಾಗೂ ಸೂಕ್ತ ಸ್ಥಳದಲ್ಲಿ ನಿರ್ಮಿಸಬೇಕೆಂಬುದು ನನ್ನ ಗುರಿ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳು ಕೂಡ ಸ್ಥಳ ನೋಡಿಕೊಂಡು ಹೋಗುತ್ತಿದ್ದಾರೆ. ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆ ಸ್ಥಳ ಕೂಡ ಪರಿಶೀಲನೆಯಲ್ಲಿದೆ ಎಂದರು.

ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು, ತಾಲ್ಲೂಕು ಅಧ್ಯಕ್ಷರಿಗೆ ಅಭಿನಂದನೆಗಳು. ಪರಸ್ಪರ ಸಹಕಾರದಿಂದ ತಾಲ್ಲೂಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು. ನಾನು ರೋಲ್ ಕಾಲ್‌ ಗಿರಾಕಿ ಅಲ್ಲ, ಅಧಿಕಾರಿಗಳು ಸೇರಿದಂತೆ ಯಾರಿಗೂ ಫೋನ್ ಮಾಡಿ ಕಾಟ ಕೊಡಲ್ಲ ಸೇಡು ತೀರಿಸಿಕೊಳ್ಳುವ ವ್ಯಕ್ತಿಯೂ ಅಲ್ಲ. ನೌಕರರ‌‌ ಸಹಾಯಕ್ಕೆ ನಾನು ಸದಾ ಬದ್ಧ ಆದರೆ, ಕೆಲಸ ಸರಿಯಾಗಿ ನಡೆಯಬೇಕು. ಸಾರ್ವಜನಿಕರಿಗೆ ರೈತರಿಗೆ ತೊಂದರೆ ಆಗದಂತೆ ಕೆಲಸ ಮಾಡಬೇಕು ಸರ್ಕಾರದ ಯೋಜನೆ ಜಾರಿ ಮಾಡಬೇಕು ಜನರಿಗೆ ತಲುಪಿಸಬೇಕು ಎಂದು ಹೇಳಿದರು.

ನಾನು ಪದಾಧಿಕಾರಿಗಳ ಚುನಾವಣೆಯಲ್ಲಿ ಇಂಥವರನ್ನೇ ಅಧ್ಯಕ್ಷರನ್ನಾಗಿ ಮಾಡಿ ಪದಾಧಿಕಾರಿಗಳಾಗಿ ಮಾಡಿ ಎಂದು ನಾನು ಹೇಳಲ್ಲ ಆ ವಿಚಾರ ತಮ್ಮ ಜವಾಬ್ದಾರಿಗೆ ಬಿಡುತ್ತೇನೆ. ಅವಿರೋಧವಾಗಿ ಆಯ್ಕೆ ಮಾಡಿಕೊಂಡರೆ ಒಳ್ಳೆಯದು ಎಂಬುದು ನನ್ನ ಭಾವನೆ ಕೆಲ ನೌಕರರು ತಮ್ಮ ಸಹೋದ್ಯೋಗಿಗಳನ್ನೇ ಲೋಕಾಯುಕ್ತಕ್ಕೆ ಹಿಡಿದುಕೊಟ್ಟಿರುವುದು ನನಗೆ ಗೊತ್ತು. ಮಾಲೂರಿನಲ್ಲಿ ಈಚೆಗೆ ಏನಾಯಿತು ಎಂಬುದು ಗೊತ್ತು. ಪಾಪ ಮಹಿಳಾ ಉದ್ಯೋಗಿ ಕಣ್ಣೀರಿಟ್ಟರು ತಮ್ಮ ಉದ್ದೇಶ ಈಡೇರಿಸಿಕೊಳ್ಳಲು ಕಿತಾಪತಿ ಮಾಡುವವರನ್ನು ನಾನು ಸುಮ್ಮನೇ ಬಿಡಲ್ಲ, ಸಹಿಸಿಕೊಳ್ಳುವುದಿಲ್ಲ. ಎಲ್ಲಿ ಮುಳಗಿಸಬೇಕು‌ ಎಂಬುದು ಗೊತ್ತು ಎಂದು ಎಚ್ಚರಿಕೆ ನೀಡಿದರು.

ರಾಜ್ಯಮಟ್ಟದಲ್ಲಿ ಜಿಲ್ಲೆಯ ನೌಕರರು ಉತ್ತಮ ಹೆಸರು ಮಾಡಬೇಕು. ಯಾರೇ ಆಯ್ಕೆಯಾದರೂ ಜಿಲ್ಲೆಯ ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ‌ಸದಸ್ಯ ಎಂ.ಎಲ್‌.ಅನಿಲ್ ಕುಮಾರ್ ಮಾತನಾಡಿ, ಈಗ ಗೆದ್ದು ನಿರ್ದೇಶಕರಾಗಿ ಆಯ್ಕೆಯಾದವರು ತಮ್ಮ ಇಲಾಖೆಯಲ್ಲಿನ ಸರ್ಕಾರಿ ನೌಕರರ ಪ್ರತಿನಿಧಿಗಳು‌. ಸರ್ಕಾರಿ ನೌಕರರ ಧ್ವನಿಯಾಗಿ ಕೆಲಸ ಮಾಡಬೇಕು. ತಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ. ವ್ಯವಸ್ಥೆಯಲ್ಲಿನ ಕಲುಷಿತ ವಾತಾವರಣವನ್ನು ತಾವೆಲ್ಲಾ ಸೇರಿ ಶುದ್ಧ ಮಾಡಬೇಕು ಇದು ಎಲ್ಲರ ಮೇಲೆ‌ ಜವಾಬ್ದಾರಿ ಇದೆ‌ ಎಂದರು.

ರಾಜ್ಯಾಂಗ ಹಾಗೂ ಕಾರ್ಯಾಂಗ ಒಟ್ಟಿಗೆ ಕೆಲಸ ‌ಮಾಡಬೇಕು.‌ ಯೋಜನೆ ‌ಜಾರಿ ಮಾಡುವವರು ತಾವು. ಸರ್ಕಾರ ಕೈಗೊಂಡ ತೀರ್ಮಾನ ಜಾರಿ ಮಾಡಬೇಕು ಎಲ್ಲರೂ ಸೇರಿ ನೌಕರರ ಸಂಘಕ್ಕೆ ಉತ್ತಮರನ್ನು ಆಯ್ಕೆ ‌ಮಾಡಿ. ಸಾಮಾಜಿಕವಾಗಿ ಎಲ್ಲಾ ವರ್ಗದವರಿಗೆ ಅವಕಾಶ ‌ಸಿಗಬೇಕು. ಮಹಿಳೆಯರಿಗೂ ಜವಾಬ್ದಾರಿ ಮಾಡಿಕೊಡಬೇಕು ಎಂದರು

ಸನ್ಮಾನ ಕಾರ್ಯಕ್ರಮದಲ್ಲಿ ಒಟ್ಟು 71 ನಿರ್ದೇಶಕರಲ್ಲಿ 60 ನಿರ್ದೇಶಕರು ಭಾಗವಹಿಸಿದ್ದರು 5 ನಿರ್ದೇಶಕರು ಸಂಘಟಕರಿಗೆ ಮೊದಲೇ ಸೂಚಿಸಿ ಸನ್ಮಾನ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿ ಹೊರಗಿದ್ದರು ಉಳಿದ 5 ನಿರ್ದೇಶಕರು ಸನ್ಮಾನದಿಂದ ದೂರ ಉಳಿದರು

ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್,‌ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಂಜಿಮಲೆ‌ ರಮೇಶ್,‌ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ‌ ಮುರಳಿ, ಮಾಲೂರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಕಂದಾಯ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್‌ ಜಿಲ್ಲಾ ಚಾಲಕರ ನೌಕರರಸಂಘದ ಅಧ್ಯಕ್ಷ ಮಾರುತಿ ಕುಮಾರ್ ಮುಂತಾದವರು ಇದ್ದರು.

ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮಾಜಿ ಅಧ್ಯಕ್ಷ ಕೆ.ಎನ್‌.‌ಮಂಜುನಾಥ್, ಕಂದಾಯ ಇಲಾಖೆ ಎಫ್‌ಡಿಎ ಅಜಯಕುಮಾರ್,‌ ಎನ್.ಶ್ರೀನಿವಾಸ್, ತಬ್ಸುಮ್‌, ನಾಗವೇಣಿ, ಮಂಜುಳಾ,‌ ನೀಲಮ್ಮ, ನಂದಿನಿ ಎಚ್.ಎ., ಸೌಮ್ಯಾ, ಮಂಜುನಾಥ್, ಮಂಜುನಾಥ್ ಕೆ.,‌ ಶ್ರೀನಿವಾಸಮೂರ್ತಿ, ಹೇಮಂತಕುಮಾರ್, ಅನಿಲ್‌ಕುಮಾರ್, ಶಿವಪ್ರಕಾಶ್, ಕೇಶವರೆಡ್ಡಿ, ನಾರಾಯಣಸ್ವಾಮಿ, ಸೋಮಶೇಖರ್ ‌ಆರ್, ರಾಮಮೂರ್ತಿ, ವೆಂಕಟೇಶ, ಚೌಡಪ್ಪ, ಡಾ.ಪ್ರಶಾಂತ್, ವೆಂಕಟೇಶ್ ಬಾಬು, ಮುರಳಿ ಮೋಹನ್, ರತ್ನಪ್ಪ, ಮೊಹಮ್ಕದ್ ಹಿದಾಯತುಲ್ಲಾ,‌ ಮಧು, ಪುರುಷೋತ್ತಮ, ಸುಬ್ರಮಣಿ, ಕೆ.ಕಿರಣ್ ಕುಮಾರ್,‌ ಕೆ.ಶ್ರೀನಿವಾಸ್ , ಮಂಜೇಶ್, ಮಂಜುನಾಥ್,‌ ಸುಬ್ರಮಣ್ಯ, ಯದುನಂದನ್, ರಾಘವೇಂದ್ರ, ಸತೀಶ್ ಕುಮಾರ್, ಬಂಗಾರಪೇಟೆಯ ಅಪ್ಪೇಗೌಡ, ಅಜಯ್, ಪ್ರಭುಕರ್ ರೆಡ್ಡಿ, ಕೆ.ಟಿ.ನಾಗರಾಜ್,‌ ಪ್ರೇಮಾ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

57 minutes ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago