Categories: ಕೋಲಾರ

ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ:‌ ಗದ್ದಲ ನೂಕಾಟ ಹೊಡೆದಾಟದ ನಡುವೆ ಕ್ಷೇತ್ರ ವಿಂಗಡಣೆಗೆ ಅನುಮೋದನೆ,

ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.

ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.

ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.

ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.

ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

7 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

10 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

12 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

14 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

14 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

21 hours ago