ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.
ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.
ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.
ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.
ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…