ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.
ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.
ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.
ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.
ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…