ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.
ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.
ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.
ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.
ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…