Categories: ಕೋಲಾರ

ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ:‌ ಗದ್ದಲ ನೂಕಾಟ ಹೊಡೆದಾಟದ ನಡುವೆ ಕ್ಷೇತ್ರ ವಿಂಗಡಣೆಗೆ ಅನುಮೋದನೆ,

ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.

ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.

ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.

ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.

ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

7 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

10 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago