ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.
ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.
ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.
ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.
ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…