ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.
ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.
ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.
ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.
ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…