ದೇವದುರ್ಗ: ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಸಹೋದರ ಬೆಂಬಲಿಗರು ಸೇರಿದಂತೆ ಒಟ್ಟು 16 ಜನರಿಗೆ ಜಿಲ್ಲಾ ನ್ಯಾಯಾಲಯದ ನಾಯದೀಶರು ಬಂಧನದ ಭೀತಿಯ ನೋಟಿಸ್ ಜಾರಿ ಮಾಡಿದ್ದಾರೆ.
ತಾಲೂಕಿನ ಕಾಕರಗಲ್ ಸಮೀಪದ ರಾಜ್ಯ ಹೆದ್ದಾರಿಗೆ ನಿರ್ಮಿಸಿರುವ ಟೋಲ್ ಗೇಟ್ ಬಂದ್ ಮಾಡಿ, ಅಲ್ಲಿನ 19,56,300 ಲಕ್ಷಗಟ್ಟಲೆ ಬೆಲೆ ಬಾಳುವ ಸಾಮಗ್ರಿಗಳನ್ನು ಧ್ವಂಸ ಮಾಡಿದ ಜೆಡಿಎಸ್ ಶಾಸಕಿಯ ಪುತ್ರನಾದ ಸಂತೋಷ ನಾಯಕ ಮತ್ತು ಸಹೋದರ, ಬೆಂಬಲಿಗರು ಗುಂಡಾವರ್ತನೆಗೆ ಸಾಕ್ಷಿಯಾಗಿದ್ದನ್ನು ಪರಿಗಣಿಸಿ ದಿನಾಂಕ:-23-4-25ರಂದು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶಾಸಕಿಯ ಪುತ್ರ ಸಂತೋಷ ನಾಯಕ, ಸಹೋದರ ಮತ್ತು ಬೆಂಬಲಿಗರು ಕೋರ್ಟ್ ಗೆ ಹಾಜರಾಗುವಂತೆ 5-6 ನೋಟಿಸ್ ಗಳಿಗೆ ಗೌರವ ನೀಡದೆ, ತಲೆಮರಿಸಿಕೊಂಡು ರಾಜರೋಷವಾಗಿ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅರೆಸ್ಟ್ ವಾರೆಂಟ್ ಮಾಡಿದರೂ ಕೂಡಾ, ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರಭಾವಿ ಶಾಸಕಿಯ ಪುತ್ರನೆಂಬ ಕಾರಣಕ್ಕೆ ಬಂಧಿಸುತ್ತಿಲ್ವ..? ಶಾಸಕರ ಮಕ್ಕಳಿಗೆ ಒಂದು ಕಾನೂನು, ಜನ ಸಾಮಾನ್ಯರಿಗೆ ಒಂದು ಕಾನೂನು ಮಾಡಲಾಗಿದೆಯಾ, ಕೂಡಲೇ ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಬೆಂಬಲಿಗರನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ಮಾಡಿದ ಕರ್ತವ್ಯಲೋಪವನ್ನು ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿಶ್ವನಾಥ ಬಲ್ಲಿದವ ಆಗ್ರಹಿಸಿದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…