ದೇವದುರ್ಗ: ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಸಹೋದರ ಬೆಂಬಲಿಗರು ಸೇರಿದಂತೆ ಒಟ್ಟು 16 ಜನರಿಗೆ ಜಿಲ್ಲಾ ನ್ಯಾಯಾಲಯದ ನಾಯದೀಶರು ಬಂಧನದ ಭೀತಿಯ ನೋಟಿಸ್ ಜಾರಿ ಮಾಡಿದ್ದಾರೆ.
ತಾಲೂಕಿನ ಕಾಕರಗಲ್ ಸಮೀಪದ ರಾಜ್ಯ ಹೆದ್ದಾರಿಗೆ ನಿರ್ಮಿಸಿರುವ ಟೋಲ್ ಗೇಟ್ ಬಂದ್ ಮಾಡಿ, ಅಲ್ಲಿನ 19,56,300 ಲಕ್ಷಗಟ್ಟಲೆ ಬೆಲೆ ಬಾಳುವ ಸಾಮಗ್ರಿಗಳನ್ನು ಧ್ವಂಸ ಮಾಡಿದ ಜೆಡಿಎಸ್ ಶಾಸಕಿಯ ಪುತ್ರನಾದ ಸಂತೋಷ ನಾಯಕ ಮತ್ತು ಸಹೋದರ, ಬೆಂಬಲಿಗರು ಗುಂಡಾವರ್ತನೆಗೆ ಸಾಕ್ಷಿಯಾಗಿದ್ದನ್ನು ಪರಿಗಣಿಸಿ ದಿನಾಂಕ:-23-4-25ರಂದು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶಾಸಕಿಯ ಪುತ್ರ ಸಂತೋಷ ನಾಯಕ, ಸಹೋದರ ಮತ್ತು ಬೆಂಬಲಿಗರು ಕೋರ್ಟ್ ಗೆ ಹಾಜರಾಗುವಂತೆ 5-6 ನೋಟಿಸ್ ಗಳಿಗೆ ಗೌರವ ನೀಡದೆ, ತಲೆಮರಿಸಿಕೊಂಡು ರಾಜರೋಷವಾಗಿ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅರೆಸ್ಟ್ ವಾರೆಂಟ್ ಮಾಡಿದರೂ ಕೂಡಾ, ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರಭಾವಿ ಶಾಸಕಿಯ ಪುತ್ರನೆಂಬ ಕಾರಣಕ್ಕೆ ಬಂಧಿಸುತ್ತಿಲ್ವ..? ಶಾಸಕರ ಮಕ್ಕಳಿಗೆ ಒಂದು ಕಾನೂನು, ಜನ ಸಾಮಾನ್ಯರಿಗೆ ಒಂದು ಕಾನೂನು ಮಾಡಲಾಗಿದೆಯಾ, ಕೂಡಲೇ ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಬೆಂಬಲಿಗರನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ಮಾಡಿದ ಕರ್ತವ್ಯಲೋಪವನ್ನು ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿಶ್ವನಾಥ ಬಲ್ಲಿದವ ಆಗ್ರಹಿಸಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…