ದೇವದುರ್ಗ: ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಸಹೋದರ ಬೆಂಬಲಿಗರು ಸೇರಿದಂತೆ ಒಟ್ಟು 16 ಜನರಿಗೆ ಜಿಲ್ಲಾ ನ್ಯಾಯಾಲಯದ ನಾಯದೀಶರು ಬಂಧನದ ಭೀತಿಯ ನೋಟಿಸ್ ಜಾರಿ ಮಾಡಿದ್ದಾರೆ.
ತಾಲೂಕಿನ ಕಾಕರಗಲ್ ಸಮೀಪದ ರಾಜ್ಯ ಹೆದ್ದಾರಿಗೆ ನಿರ್ಮಿಸಿರುವ ಟೋಲ್ ಗೇಟ್ ಬಂದ್ ಮಾಡಿ, ಅಲ್ಲಿನ 19,56,300 ಲಕ್ಷಗಟ್ಟಲೆ ಬೆಲೆ ಬಾಳುವ ಸಾಮಗ್ರಿಗಳನ್ನು ಧ್ವಂಸ ಮಾಡಿದ ಜೆಡಿಎಸ್ ಶಾಸಕಿಯ ಪುತ್ರನಾದ ಸಂತೋಷ ನಾಯಕ ಮತ್ತು ಸಹೋದರ, ಬೆಂಬಲಿಗರು ಗುಂಡಾವರ್ತನೆಗೆ ಸಾಕ್ಷಿಯಾಗಿದ್ದನ್ನು ಪರಿಗಣಿಸಿ ದಿನಾಂಕ:-23-4-25ರಂದು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶಾಸಕಿಯ ಪುತ್ರ ಸಂತೋಷ ನಾಯಕ, ಸಹೋದರ ಮತ್ತು ಬೆಂಬಲಿಗರು ಕೋರ್ಟ್ ಗೆ ಹಾಜರಾಗುವಂತೆ 5-6 ನೋಟಿಸ್ ಗಳಿಗೆ ಗೌರವ ನೀಡದೆ, ತಲೆಮರಿಸಿಕೊಂಡು ರಾಜರೋಷವಾಗಿ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅರೆಸ್ಟ್ ವಾರೆಂಟ್ ಮಾಡಿದರೂ ಕೂಡಾ, ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರಭಾವಿ ಶಾಸಕಿಯ ಪುತ್ರನೆಂಬ ಕಾರಣಕ್ಕೆ ಬಂಧಿಸುತ್ತಿಲ್ವ..? ಶಾಸಕರ ಮಕ್ಕಳಿಗೆ ಒಂದು ಕಾನೂನು, ಜನ ಸಾಮಾನ್ಯರಿಗೆ ಒಂದು ಕಾನೂನು ಮಾಡಲಾಗಿದೆಯಾ, ಕೂಡಲೇ ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಬೆಂಬಲಿಗರನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ಮಾಡಿದ ಕರ್ತವ್ಯಲೋಪವನ್ನು ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿಶ್ವನಾಥ ಬಲ್ಲಿದವ ಆಗ್ರಹಿಸಿದರು.
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…