ದೇವದುರ್ಗ: ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಸಹೋದರ ಬೆಂಬಲಿಗರು ಸೇರಿದಂತೆ ಒಟ್ಟು 16 ಜನರಿಗೆ ಜಿಲ್ಲಾ ನ್ಯಾಯಾಲಯದ ನಾಯದೀಶರು ಬಂಧನದ ಭೀತಿಯ ನೋಟಿಸ್ ಜಾರಿ ಮಾಡಿದ್ದಾರೆ.
ತಾಲೂಕಿನ ಕಾಕರಗಲ್ ಸಮೀಪದ ರಾಜ್ಯ ಹೆದ್ದಾರಿಗೆ ನಿರ್ಮಿಸಿರುವ ಟೋಲ್ ಗೇಟ್ ಬಂದ್ ಮಾಡಿ, ಅಲ್ಲಿನ 19,56,300 ಲಕ್ಷಗಟ್ಟಲೆ ಬೆಲೆ ಬಾಳುವ ಸಾಮಗ್ರಿಗಳನ್ನು ಧ್ವಂಸ ಮಾಡಿದ ಜೆಡಿಎಸ್ ಶಾಸಕಿಯ ಪುತ್ರನಾದ ಸಂತೋಷ ನಾಯಕ ಮತ್ತು ಸಹೋದರ, ಬೆಂಬಲಿಗರು ಗುಂಡಾವರ್ತನೆಗೆ ಸಾಕ್ಷಿಯಾಗಿದ್ದನ್ನು ಪರಿಗಣಿಸಿ ದಿನಾಂಕ:-23-4-25ರಂದು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶಾಸಕಿಯ ಪುತ್ರ ಸಂತೋಷ ನಾಯಕ, ಸಹೋದರ ಮತ್ತು ಬೆಂಬಲಿಗರು ಕೋರ್ಟ್ ಗೆ ಹಾಜರಾಗುವಂತೆ 5-6 ನೋಟಿಸ್ ಗಳಿಗೆ ಗೌರವ ನೀಡದೆ, ತಲೆಮರಿಸಿಕೊಂಡು ರಾಜರೋಷವಾಗಿ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅರೆಸ್ಟ್ ವಾರೆಂಟ್ ಮಾಡಿದರೂ ಕೂಡಾ, ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರಭಾವಿ ಶಾಸಕಿಯ ಪುತ್ರನೆಂಬ ಕಾರಣಕ್ಕೆ ಬಂಧಿಸುತ್ತಿಲ್ವ..? ಶಾಸಕರ ಮಕ್ಕಳಿಗೆ ಒಂದು ಕಾನೂನು, ಜನ ಸಾಮಾನ್ಯರಿಗೆ ಒಂದು ಕಾನೂನು ಮಾಡಲಾಗಿದೆಯಾ, ಕೂಡಲೇ ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಬೆಂಬಲಿಗರನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ಮಾಡಿದ ಕರ್ತವ್ಯಲೋಪವನ್ನು ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿಶ್ವನಾಥ ಬಲ್ಲಿದವ ಆಗ್ರಹಿಸಿದರು.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…