ದೇವದುರ್ಗ: ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಸಹೋದರ ಬೆಂಬಲಿಗರು ಸೇರಿದಂತೆ ಒಟ್ಟು 16 ಜನರಿಗೆ ಜಿಲ್ಲಾ ನ್ಯಾಯಾಲಯದ ನಾಯದೀಶರು ಬಂಧನದ ಭೀತಿಯ ನೋಟಿಸ್ ಜಾರಿ ಮಾಡಿದ್ದಾರೆ.
ತಾಲೂಕಿನ ಕಾಕರಗಲ್ ಸಮೀಪದ ರಾಜ್ಯ ಹೆದ್ದಾರಿಗೆ ನಿರ್ಮಿಸಿರುವ ಟೋಲ್ ಗೇಟ್ ಬಂದ್ ಮಾಡಿ, ಅಲ್ಲಿನ 19,56,300 ಲಕ್ಷಗಟ್ಟಲೆ ಬೆಲೆ ಬಾಳುವ ಸಾಮಗ್ರಿಗಳನ್ನು ಧ್ವಂಸ ಮಾಡಿದ ಜೆಡಿಎಸ್ ಶಾಸಕಿಯ ಪುತ್ರನಾದ ಸಂತೋಷ ನಾಯಕ ಮತ್ತು ಸಹೋದರ, ಬೆಂಬಲಿಗರು ಗುಂಡಾವರ್ತನೆಗೆ ಸಾಕ್ಷಿಯಾಗಿದ್ದನ್ನು ಪರಿಗಣಿಸಿ ದಿನಾಂಕ:-23-4-25ರಂದು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶಾಸಕಿಯ ಪುತ್ರ ಸಂತೋಷ ನಾಯಕ, ಸಹೋದರ ಮತ್ತು ಬೆಂಬಲಿಗರು ಕೋರ್ಟ್ ಗೆ ಹಾಜರಾಗುವಂತೆ 5-6 ನೋಟಿಸ್ ಗಳಿಗೆ ಗೌರವ ನೀಡದೆ, ತಲೆಮರಿಸಿಕೊಂಡು ರಾಜರೋಷವಾಗಿ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅರೆಸ್ಟ್ ವಾರೆಂಟ್ ಮಾಡಿದರೂ ಕೂಡಾ, ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರಭಾವಿ ಶಾಸಕಿಯ ಪುತ್ರನೆಂಬ ಕಾರಣಕ್ಕೆ ಬಂಧಿಸುತ್ತಿಲ್ವ..? ಶಾಸಕರ ಮಕ್ಕಳಿಗೆ ಒಂದು ಕಾನೂನು, ಜನ ಸಾಮಾನ್ಯರಿಗೆ ಒಂದು ಕಾನೂನು ಮಾಡಲಾಗಿದೆಯಾ, ಕೂಡಲೇ ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಬೆಂಬಲಿಗರನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ಮಾಡಿದ ಕರ್ತವ್ಯಲೋಪವನ್ನು ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿಶ್ವನಾಥ ಬಲ್ಲಿದವ ಆಗ್ರಹಿಸಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…