Categories: ರಾಜ್ಯ

ಶಾಸಕಿಯ ಪುತ್ರನಿಗೆ ಬಂಧನದ ಭೀತಿ…

ದೇವದುರ್ಗ: ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಸಹೋದರ ಬೆಂಬಲಿಗರು ಸೇರಿದಂತೆ ಒಟ್ಟು 16 ಜನರಿಗೆ ಜಿಲ್ಲಾ ನ್ಯಾಯಾಲಯದ ನಾಯದೀಶರು ಬಂಧನದ ಭೀತಿಯ ನೋಟಿಸ್ ಜಾರಿ ಮಾಡಿದ್ದಾರೆ.

ತಾಲೂಕಿನ ಕಾಕರಗಲ್ ಸಮೀಪದ ರಾಜ್ಯ ಹೆದ್ದಾರಿಗೆ ನಿರ್ಮಿಸಿರುವ ಟೋಲ್ ಗೇಟ್ ಬಂದ್ ಮಾಡಿ, ಅಲ್ಲಿನ 19,56,300 ಲಕ್ಷಗಟ್ಟಲೆ ಬೆಲೆ ಬಾಳುವ ಸಾಮಗ್ರಿಗಳನ್ನು ಧ್ವಂಸ ಮಾಡಿದ ಜೆಡಿಎಸ್ ಶಾಸಕಿಯ ಪುತ್ರನಾದ ಸಂತೋಷ ನಾಯಕ ಮತ್ತು ಸಹೋದರ, ಬೆಂಬಲಿಗರು ಗುಂಡಾವರ್ತನೆಗೆ ಸಾಕ್ಷಿಯಾಗಿದ್ದನ್ನು ಪರಿಗಣಿಸಿ ದಿನಾಂಕ:-23-4-25ರಂದು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಶಾಸಕಿಯ ಪುತ್ರ ಸಂತೋಷ ನಾಯಕ, ಸಹೋದರ ಮತ್ತು ಬೆಂಬಲಿಗರು ಕೋರ್ಟ್ ಗೆ ಹಾಜರಾಗುವಂತೆ 5-6 ನೋಟಿಸ್ ಗಳಿಗೆ ಗೌರವ ನೀಡದೆ, ತಲೆಮರಿಸಿಕೊಂಡು ರಾಜರೋಷವಾಗಿ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅರೆಸ್ಟ್ ವಾರೆಂಟ್ ಮಾಡಿದರೂ ಕೂಡಾ, ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರಭಾವಿ ಶಾಸಕಿಯ ಪುತ್ರನೆಂಬ ಕಾರಣಕ್ಕೆ ಬಂಧಿಸುತ್ತಿಲ್ವ..? ಶಾಸಕರ ಮಕ್ಕಳಿಗೆ ಒಂದು ಕಾನೂನು, ಜನ ಸಾಮಾನ್ಯರಿಗೆ ಒಂದು ಕಾನೂನು ಮಾಡಲಾಗಿದೆಯಾ, ಕೂಡಲೇ ಶಾಸಕಿಯ ಪುತ್ರ ಸಂತೋಷ ನಾಯಕ ಮತ್ತು ಬೆಂಬಲಿಗರನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ಮಾಡಿದ ಕರ್ತವ್ಯಲೋಪವನ್ನು ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿಶ್ವನಾಥ ಬಲ್ಲಿದವ ಆಗ್ರಹಿಸಿದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

2 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago