Categories: ಕೋಲಾರ

ಶಾಸಕ ಕೊತ್ತೂರು ಬಣದಿಂದ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ಸ್ಪರ್ಧೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರ ಮಧ್ಯಸ್ಥಿಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರನ್ನು ಸ್ಪರ್ಧೆ ಮಾಡಲು ಅವಕಾಶ ನೀಡಲಾಗಿದೆ.

ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ಸಂಘದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರು ಜಿಲ್ಲೆಯ ಎಲ್ಲಾ ಶಾಸಕರೊಂಂದಿಗೆ ಚರ್ಚಿಸಿ ಎಲ್ಲರ ವಿಶ್ವಾಸವನ್ನು ಪಡೆದು ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ ಇದೇ ಮೊದಲ ಬಾರಿಗೆ ನೌಕರರ ಸಂಘದಲ್ಲಿ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಿದ್ದು ಅಜಯ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಹಿಂದೆ ಕುರುಬರು, ಒಕ್ಕಲಿಗರು, ವಹ್ನಿಕುಲ, ಯಾದವ, ಬಲಿಜಗರು ಅಧ್ಯಕ್ಷರಾಗಿ ಆಯ್ಕೆಯಾದ ಉದಾಹರಣೆ ಇದ್ದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರ ಮಧ್ಯಸ್ಥಿಕೆಯಿಂದಾಗಿ ದಲಿತರಿಗೆ ಅವಕಾಶ ನೀಡಲಾಗಿದೆ.

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನಾಮಪತ್ರ ಸಲ್ಲಿಸುವ ಮುಂಚೆ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯ ಪಕ್ಕದಲ್ಲಿರುವ ಶಾಸಕರ ಅಥಿತಿ ಗೃಹದಲ್ಲಿ ಸರ್ಕಾರಿ ನೌಕರರ ಸಂಘದ ಪ್ರಮುಖರೊಂದಿಗೆ ಚರ್ಚಿಸಿ ಈ ಆಯ್ಕೆ ಮಾಡಲಾಯಿತು ಅಧ್ಯಕ್ಷರು, ರಾಜ್ಯ ಪರಿಷತ್, ಖಜಾಂಚಿ ಸ್ಥಾನಗಳು ಸೇರಿದಂತೆ ಉಳಿದ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ನೀಡಲು ಸಂಘದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

12 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

20 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago