Categories: ಕೋಲಾರ

ಶಾಸಕ ಕೊತ್ತೂರು ಬಣದಿಂದ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ಸ್ಪರ್ಧೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರ ಮಧ್ಯಸ್ಥಿಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರನ್ನು ಸ್ಪರ್ಧೆ ಮಾಡಲು ಅವಕಾಶ ನೀಡಲಾಗಿದೆ.

ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ಸಂಘದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರು ಜಿಲ್ಲೆಯ ಎಲ್ಲಾ ಶಾಸಕರೊಂಂದಿಗೆ ಚರ್ಚಿಸಿ ಎಲ್ಲರ ವಿಶ್ವಾಸವನ್ನು ಪಡೆದು ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ ಇದೇ ಮೊದಲ ಬಾರಿಗೆ ನೌಕರರ ಸಂಘದಲ್ಲಿ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಿದ್ದು ಅಜಯ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಹಿಂದೆ ಕುರುಬರು, ಒಕ್ಕಲಿಗರು, ವಹ್ನಿಕುಲ, ಯಾದವ, ಬಲಿಜಗರು ಅಧ್ಯಕ್ಷರಾಗಿ ಆಯ್ಕೆಯಾದ ಉದಾಹರಣೆ ಇದ್ದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರ ಮಧ್ಯಸ್ಥಿಕೆಯಿಂದಾಗಿ ದಲಿತರಿಗೆ ಅವಕಾಶ ನೀಡಲಾಗಿದೆ.

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನಾಮಪತ್ರ ಸಲ್ಲಿಸುವ ಮುಂಚೆ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯ ಪಕ್ಕದಲ್ಲಿರುವ ಶಾಸಕರ ಅಥಿತಿ ಗೃಹದಲ್ಲಿ ಸರ್ಕಾರಿ ನೌಕರರ ಸಂಘದ ಪ್ರಮುಖರೊಂದಿಗೆ ಚರ್ಚಿಸಿ ಈ ಆಯ್ಕೆ ಮಾಡಲಾಯಿತು ಅಧ್ಯಕ್ಷರು, ರಾಜ್ಯ ಪರಿಷತ್, ಖಜಾಂಚಿ ಸ್ಥಾನಗಳು ಸೇರಿದಂತೆ ಉಳಿದ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ನೀಡಲು ಸಂಘದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

4 hours ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

7 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

20 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

20 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

20 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

1 day ago