ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರ ಮಧ್ಯಸ್ಥಿಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರನ್ನು ಸ್ಪರ್ಧೆ ಮಾಡಲು ಅವಕಾಶ ನೀಡಲಾಗಿದೆ.
ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ಸಂಘದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರು ಜಿಲ್ಲೆಯ ಎಲ್ಲಾ ಶಾಸಕರೊಂಂದಿಗೆ ಚರ್ಚಿಸಿ ಎಲ್ಲರ ವಿಶ್ವಾಸವನ್ನು ಪಡೆದು ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ ಇದೇ ಮೊದಲ ಬಾರಿಗೆ ನೌಕರರ ಸಂಘದಲ್ಲಿ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಿದ್ದು ಅಜಯ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಹಿಂದೆ ಕುರುಬರು, ಒಕ್ಕಲಿಗರು, ವಹ್ನಿಕುಲ, ಯಾದವ, ಬಲಿಜಗರು ಅಧ್ಯಕ್ಷರಾಗಿ ಆಯ್ಕೆಯಾದ ಉದಾಹರಣೆ ಇದ್ದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರ ಮಧ್ಯಸ್ಥಿಕೆಯಿಂದಾಗಿ ದಲಿತರಿಗೆ ಅವಕಾಶ ನೀಡಲಾಗಿದೆ.
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನಾಮಪತ್ರ ಸಲ್ಲಿಸುವ ಮುಂಚೆ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯ ಪಕ್ಕದಲ್ಲಿರುವ ಶಾಸಕರ ಅಥಿತಿ ಗೃಹದಲ್ಲಿ ಸರ್ಕಾರಿ ನೌಕರರ ಸಂಘದ ಪ್ರಮುಖರೊಂದಿಗೆ ಚರ್ಚಿಸಿ ಈ ಆಯ್ಕೆ ಮಾಡಲಾಯಿತು ಅಧ್ಯಕ್ಷರು, ರಾಜ್ಯ ಪರಿಷತ್, ಖಜಾಂಚಿ ಸ್ಥಾನಗಳು ಸೇರಿದಂತೆ ಉಳಿದ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ನೀಡಲು ಸಂಘದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…