TAPMCS Election:ಶಾಸಕ ಧೀರಜ್ ಮುನಿರಾಜ್ ವಿರುದ್ಧ ಹುಸ್ಕೂರ್ ಆನಂದ್ ಆಕ್ರೋಶ: ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್

ಶಾಸಕ ಧೀರಜ್ ಮುನಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್, ಟಿಎಪಿಎಂಸಿಎಸ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ (ಎನ್ ಡಿಎ) ಮೈತ್ರಿ ಘೋಷಣೆ ಆದ ಮೇಲೆ ವೋಟ್ ಹಾಕಿ‌. ಇಲ್ಲದಿದ್ದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ ಎಂದು ಹೇಳಿದರು.

ಎನ್ ಡಿ ಎ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆದೇಶವಿದೆ. ಆದರೆ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರು ಅಸಂಬದ್ಧವಾಗಿ ಮೈತ್ರಿ ಮಾಡಿಕೊಂಡು ಜೆಡಿಎಸ್ ಮತದಾರರನ್ನು ದಿಕ್ಕುತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ….

ಏಕಪಕ್ಷೀಯವಾಗಿ ಅವರ ಇಚ್ಛೆಯಾಗಿ ಶಾಸಕ ಧೀರಜ್ ಮುನಿರಾಜ್ ನಡೆದುಕೊಳ್ಳುತ್ತಿದ್ದಾರೆ. ದೇವೇಗೌಡರ ಆದೇಶ ಉಲ್ಲಂಘನೆ ಮಾಡಿ ಮೈತ್ರಿ ಮಾಡಿಕೊಂಡು ನಮ್ಮಲ್ಲಿ‌ ಗೊಂದಲ ಸೃಷ್ಟಿ‌ ಮಾಡುತ್ತಿದ್ದಾರೆ ಎಂದರು.

ನಮ್ಮನೆಗೂ ಮೂರು ವೋಟ್ ಇವೆ.‌ ಇದೂವರೆಗೂ ನಮ್ಮನಗೆ ಬಿಜೆಪಿಯವರು ವೋಟ್ ಕೇಳೋದಕ್ಕೆ ಬಂದಿಲ್ಲ. ಕೇವಲ ಜೆಡಿಎಸ್ ನವರು ಬಂದಿದ್ದಾರೆ. ಇದನ್ನ ಎನ್ ಡಿಎ ಮೈತ್ರಿ ಅಂತಾರಾ ಎಂದು ಹೇಳಿದರು..

ಇದೂವೆರೆಗೂ ಎನ್ ಡಿಎ ಮೈತ್ರಿಕೂಟದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿಲ್ಲ. ಮತದಾರರು, ರೈತರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಎನ್ ಡಿಎ ಮೈತ್ರಿಯಾದರೆ ಎಲ್ಲರಿಗೂ ವೋಟ್ ಹಾಕಬಹುದು ನಮ್ಮದೇನು ಅಭ್ಯಂತರ ಇರುವುದಿಲ್ಲ. ಇಲ್ಲ ಅಂದ್ರೆ ನಮ್ಮ ಜೆಡಿಎಸ್ ನವರಿಗೆ ಮಾತ್ರ ವೋಟ್ ಹಾಕಿ ಎಂದು ತಿಳಿಸಿದರು.

Ramesh Babu

Journalist

Recent Posts

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

3 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

6 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

11 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

11 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

21 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

22 hours ago