ಶಾಸಕ ಧೀರಜ್ ಮುನಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್, ಟಿಎಪಿಎಂಸಿಎಸ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ (ಎನ್ ಡಿಎ) ಮೈತ್ರಿ ಘೋಷಣೆ ಆದ ಮೇಲೆ ವೋಟ್ ಹಾಕಿ. ಇಲ್ಲದಿದ್ದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ ಎಂದು ಹೇಳಿದರು.
ಎನ್ ಡಿ ಎ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆದೇಶವಿದೆ. ಆದರೆ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರು ಅಸಂಬದ್ಧವಾಗಿ ಮೈತ್ರಿ ಮಾಡಿಕೊಂಡು ಜೆಡಿಎಸ್ ಮತದಾರರನ್ನು ದಿಕ್ಕುತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ….
ಏಕಪಕ್ಷೀಯವಾಗಿ ಅವರ ಇಚ್ಛೆಯಾಗಿ ಶಾಸಕ ಧೀರಜ್ ಮುನಿರಾಜ್ ನಡೆದುಕೊಳ್ಳುತ್ತಿದ್ದಾರೆ. ದೇವೇಗೌಡರ ಆದೇಶ ಉಲ್ಲಂಘನೆ ಮಾಡಿ ಮೈತ್ರಿ ಮಾಡಿಕೊಂಡು ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದರು.
ನಮ್ಮನೆಗೂ ಮೂರು ವೋಟ್ ಇವೆ. ಇದೂವರೆಗೂ ನಮ್ಮನಗೆ ಬಿಜೆಪಿಯವರು ವೋಟ್ ಕೇಳೋದಕ್ಕೆ ಬಂದಿಲ್ಲ. ಕೇವಲ ಜೆಡಿಎಸ್ ನವರು ಬಂದಿದ್ದಾರೆ. ಇದನ್ನ ಎನ್ ಡಿಎ ಮೈತ್ರಿ ಅಂತಾರಾ ಎಂದು ಹೇಳಿದರು..
ಇದೂವೆರೆಗೂ ಎನ್ ಡಿಎ ಮೈತ್ರಿಕೂಟದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿಲ್ಲ. ಮತದಾರರು, ರೈತರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಎನ್ ಡಿಎ ಮೈತ್ರಿಯಾದರೆ ಎಲ್ಲರಿಗೂ ವೋಟ್ ಹಾಕಬಹುದು ನಮ್ಮದೇನು ಅಭ್ಯಂತರ ಇರುವುದಿಲ್ಲ. ಇಲ್ಲ ಅಂದ್ರೆ ನಮ್ಮ ಜೆಡಿಎಸ್ ನವರಿಗೆ ಮಾತ್ರ ವೋಟ್ ಹಾಕಿ ಎಂದು ತಿಳಿಸಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…