ಶಾಸಕ ಧೀರಜ್ ಮುನಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್, ಟಿಎಪಿಎಂಸಿಎಸ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ (ಎನ್ ಡಿಎ) ಮೈತ್ರಿ ಘೋಷಣೆ ಆದ ಮೇಲೆ ವೋಟ್ ಹಾಕಿ. ಇಲ್ಲದಿದ್ದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ ಎಂದು ಹೇಳಿದರು.
ಎನ್ ಡಿ ಎ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆದೇಶವಿದೆ. ಆದರೆ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರು ಅಸಂಬದ್ಧವಾಗಿ ಮೈತ್ರಿ ಮಾಡಿಕೊಂಡು ಜೆಡಿಎಸ್ ಮತದಾರರನ್ನು ದಿಕ್ಕುತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ….
ಏಕಪಕ್ಷೀಯವಾಗಿ ಅವರ ಇಚ್ಛೆಯಾಗಿ ಶಾಸಕ ಧೀರಜ್ ಮುನಿರಾಜ್ ನಡೆದುಕೊಳ್ಳುತ್ತಿದ್ದಾರೆ. ದೇವೇಗೌಡರ ಆದೇಶ ಉಲ್ಲಂಘನೆ ಮಾಡಿ ಮೈತ್ರಿ ಮಾಡಿಕೊಂಡು ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದರು.
ನಮ್ಮನೆಗೂ ಮೂರು ವೋಟ್ ಇವೆ. ಇದೂವರೆಗೂ ನಮ್ಮನಗೆ ಬಿಜೆಪಿಯವರು ವೋಟ್ ಕೇಳೋದಕ್ಕೆ ಬಂದಿಲ್ಲ. ಕೇವಲ ಜೆಡಿಎಸ್ ನವರು ಬಂದಿದ್ದಾರೆ. ಇದನ್ನ ಎನ್ ಡಿಎ ಮೈತ್ರಿ ಅಂತಾರಾ ಎಂದು ಹೇಳಿದರು..
ಇದೂವೆರೆಗೂ ಎನ್ ಡಿಎ ಮೈತ್ರಿಕೂಟದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿಲ್ಲ. ಮತದಾರರು, ರೈತರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಎನ್ ಡಿಎ ಮೈತ್ರಿಯಾದರೆ ಎಲ್ಲರಿಗೂ ವೋಟ್ ಹಾಕಬಹುದು ನಮ್ಮದೇನು ಅಭ್ಯಂತರ ಇರುವುದಿಲ್ಲ. ಇಲ್ಲ ಅಂದ್ರೆ ನಮ್ಮ ಜೆಡಿಎಸ್ ನವರಿಗೆ ಮಾತ್ರ ವೋಟ್ ಹಾಕಿ ಎಂದು ತಿಳಿಸಿದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…