ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ನಡೆದಿದೆ.
ಕಾರಿನಲ್ಲಿ ಸನ್ರೂಫ್ ಮೂಲಕ ಹೊರಬಂದು ಬೆಂಬಲಿಗರತ್ತ ಕೈಬೀಸುತ್ತಿದ್ದ ವೇಳೆ ಕೆಲವರು ಪ್ರತಿಭಟನೆ ನಡೆಸಿ, ಶಾಸಕನ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಕೆಲ ಬೆಂಬಲಿಗರು ‘ಹುಚ್ಚ, ಹುಚ್ಚ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.
ಪ್ರತಿಭಟನಾಕಾರರ ವರ್ತನೆಗೆ ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು ಕಾರಿನ ಮೇಲೆಯೇ ನಿಂತು ಮೀಸೆ ತಿರುವಿ ತೊಡೆ ತಟ್ಟುವ ಮೂಲಕ ಸವಾಲಿನ ಭಂಗಿ ಪ್ರದರ್ಶಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಶಾಸಕನ ಕಾರಿನತ್ತ ಚಪ್ಪಲಿ ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸಿದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…