ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ನಡೆದಿದೆ.
ಕಾರಿನಲ್ಲಿ ಸನ್ರೂಫ್ ಮೂಲಕ ಹೊರಬಂದು ಬೆಂಬಲಿಗರತ್ತ ಕೈಬೀಸುತ್ತಿದ್ದ ವೇಳೆ ಕೆಲವರು ಪ್ರತಿಭಟನೆ ನಡೆಸಿ, ಶಾಸಕನ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಕೆಲ ಬೆಂಬಲಿಗರು ‘ಹುಚ್ಚ, ಹುಚ್ಚ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.
ಪ್ರತಿಭಟನಾಕಾರರ ವರ್ತನೆಗೆ ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು ಕಾರಿನ ಮೇಲೆಯೇ ನಿಂತು ಮೀಸೆ ತಿರುವಿ ತೊಡೆ ತಟ್ಟುವ ಮೂಲಕ ಸವಾಲಿನ ಭಂಗಿ ಪ್ರದರ್ಶಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಶಾಸಕನ ಕಾರಿನತ್ತ ಚಪ್ಪಲಿ ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸಿದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…