ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಹಾಗೂ ವಿನಯ್ ಗುರೂಜಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಟಿ.ಎ. ಶರವಣ, ವಿನಯ್ ಗುರೂಜಿ ಜೊತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತೀರ್ಥ-ಪ್ರಸಾದ ಸ್ವೀಕರಿಸಿದ ಅವರು, ದೇಗುಲದ ವತಿಯಿಂದ ಸ್ಮರಣಿಕೆ ಸ್ವೀಕರಿಸಿ ಗೌರವಿಸಲ್ಪಟ್ಟರು.

ಪೂಜೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಿ.ಎ. ಶರವಣ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರಿಗೆ ಸಮೃದ್ಧ ಬೆಳೆ ಬರಲಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಶೀಘ್ರ ಗುಣಮುಖರಾಗಲಿ, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಲಿ ಹಾಗೂ ರಾಜ್ಯ ಮತ್ತು ರಾಷ್ಟ್ರದ ಜನರ ಸೇವೆ ಮಾಡುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಜೊತೆಗೆ ಮುಂದಿನ ದಿನಗಳಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವ ಶಕ್ತಿ ನೀಡುವಂತೆ ಪ್ರಾರ್ಥಿಸಿದ್ದಾಗಿ ತಿಳಿಸಿದರು.

ಇದೇ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಟಿ.ಎ. ಶರವಣ ತೀವ್ರ ವಾಗ್ದಾಳಿ ನಡೆಸಿದರು. ಶಾಸಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು “ಕಾಮಿಡಿ ಪೀಸ್” ಆಗದೆ “ಮಾಸ್ಟರ್ ಪೀಸ್” ಆಗಬೇಕು ಎಂದು ಹೇಳಿದ ಅವರು, ದೊಡ್ಡ ನಾಯಕರ ಬಗ್ಗೆ ಮಾತನಾಡುವ ಮುನ್ನ ಸಂಪೂರ್ಣ ಮಾಹಿತಿ ತಿಳಿದುಕೊಂಡು ಮಾತನಾಡುವುದು ಸೂಕ್ತ ಎಂದು ಸಲಹೆ ನೀಡಿದರು.

ಜನರ ಬಳಿ ಐದು ವರ್ಷಕ್ಕೊಮ್ಮೆ ಹೋಗಲೇಬೇಕು. ಆಗ ವ್ಯಕ್ತಿಯ ಸಂಸ್ಕಾರ ಮತ್ತು ವ್ಯಕ್ತಿತ್ವವನ್ನು ಜನ ಅಳೆಯುತ್ತಾರೆ. ಎಲ್ಲಿ ಸಂಸ್ಕಾರ ಇರುತ್ತದೆಯೋ ಅಲ್ಲಿ ನಮಸ್ಕಾರ ಇರುತ್ತದೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಮೊದಲ ಬಾರಿಗೆ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜನರನ್ನು ಮೆಚ್ಚಿಸಲು ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಬಾರದು. ಉತ್ತಮ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿರುವ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದು, ಶಾಸಕರಾಗಿ ಇನ್ನಷ್ಟು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಯನ್ನು ಪ್ರದೀಪ್ ಈಶ್ವರ್ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೆ, ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ ಎಂದು ಜನ ಮಾತನಾಡುತ್ತಿದ್ದಾರೆ. ಪ್ರದೀಪ್ ಈಶ್ವರ್ ಅವರು ಎಚ್ಚರಿಕೆಯಿಂದ ಮಾತನಾಡುವುದು ಸೂಕ್ತ ಎಂದು ಟಿ.ಎ. ಶರವಣ ಹೇಳಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago