ಶಾಸಕ ಮಾಡಾಳ್ ಪುತ್ರನ ಲಂಚಾವತಾರ ಪ್ರಕರಣ; ಪ್ರಕರಣ ತನಿಖೆ ಹಂತದಲ್ಲಿದೆ; ಪಕ್ಷಕ್ಕೆ ಯಾವ ಹಾನಿ ಆಗಲ್ಲ-ಗೃಹ ಸಚಿವ ಆರಗ ಜ್ಞಾನೇಂದ್ರ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕಾರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದಿಂದ ಬಿಜೆಪಿಗೆ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಕರಣದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಕೈಗೆ ಸಿಕ್ಕಿಬಿದಿದ್ದಾರೆ ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಲಿದೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ಸಿಕ್ಕ ಹಣ ಕಾನೂನು ಬಾಹಿರವಾಗಿದ್ದರೇ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು,

ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲಂಚ ಸ್ವೀಕಾರ ವಿಚಾರ ತಿಳಿಯುತ್ತಿದ್ದಂತೆ ಶಾಸಕ ವಿರೂಪಾಕ್ಷಪ್ಪ ಈಗಾಗಲೇ ನೈತಿಕ ಹೊಣೆಹೊತ್ತು ಕೆ. ಎಸ್. ಡಿ.ಎಲ್ ಗೆ ರಾಜಿನಾಮೆ ನೀಡಿದ್ದಾರೆ, ಮಾನ್ಯ ಮುಖ್ಯಂಮತ್ರಿಗಳು ಈ ಕುರಿತು ಪ್ರತಿಕ್ರಿಯೆ ನೀಡಿದ್ದೂ ಪಾರದರ್ಶಕ ತನಿಖೆ ನಡೆಯಲಿದೆ.

ಲೋಕಾಯುಕ್ತ ಕತ್ತು ಹಿಸುಕಿದ್ದ ಕಾಂಗ್ರೆಸ್ ಪಕ್ಷ :

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಲೋಕಾಯುಕ್ತವನ್ನು ಕುತ್ತಿಗೆ ಹಿಸುಕಿ ಕುಳಿತಿದ್ದರು, ಆಗ ಲೋಕಾಯುಕ್ತ ಇದ್ದಿದ್ದರೇ ಕಾಂಗ್ರೆಸ್ ನ ಹಲವು ಪ್ರಮುಖರು ಇಂದು ಜೈಲಿನಲ್ಲಿರಬೇಕಿತ್ತು, ನಾವು ಇಂದು ಲೋಕಾಯುಕ್ತಕ್ಕೆ ಸಂಪೂರ್ಣ ಶಕ್ತಿ ನೀಡಿದ್ದೇವೆ ಹೀಗಾಗಿ ರೈಡ್ ಗಳು ನಡೆಯುತ್ತಿದೆ. ಇದಕ್ಕೆ ಬಿಜೆಪಿ, ಕಾಂಗ್ರೆಸ್ ಎಂಬ ವ್ಯತ್ಯಾಸವಿಲ್ಲ ಎಂದರು.

ಇದಕ್ಕೂ ಮೊದಲು ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ದುಡ್ಡು ಸಿಕ್ಕಿರುವ ಉದಾಹರಣೆಗಳಿವೆ, ಇಷ್ಟೆಲ್ಲ ಆಗಿದ್ದರೂ ಯಾವ ನೈತಿಕತೆ ಇಟ್ಟುಕೊಂಡು ಮಾತನಾಡುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು.

ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಕಿತ್ತಾಟ :

ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಇಬ್ಬರ ಜಗಳದಿಂದ ಈಗಾಗಲೇ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ, ಇಬ್ಬರಿಗೂ ಎರಡುಮೂರು ಬಾರಿ ಎಚ್ಚರಿಕೆ ನೀಡಿದ್ದರೂ ಮುಂದುವರೆಸಿದ್ದಾರೆ, ಇವರ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ, ಇಬ್ಬರಿಗೂ ಇನ್ನೂ ಯಾವ ಪೋಸ್ಟ್ ನೀಡಿಲ್ಲ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳಿಂದ ಮೋಸ:

ಸೈಬರ್ ಕ್ರೈಮ್ ಪ್ರಕರಣಗಳು ಈಗಾಗಲೆ ಹೆಚ್ಚುತ್ತಿದ್ದೂ ಸೈಬರ್ ಕ್ರೈಮ್ ವಿಭಾಗವನ್ನು ಗಟ್ಟಿಗೊಳಿಸಿದ್ದೇವೆ ಮತ್ತು ಸಾರ್ವಜನಿಕರು ಕೂಡ ಇದಕ್ಕೆ ಸಹಕರಿಸಬೇಕಾಗುತ್ತದೆ, ಸೈಬರ್ ವಂಚನೆಗೊಳಗಾದ ( ಗೋಲ್ಡನ್ ಹವರ್ ) ಎರಡು ಗಂಟೆಗಳ ಒಳಗೆ 112 ಗೆ ಕರೆ ಮಾಡಿ ವಿವರ ನೀಡಿದರೆ ಅಕೌಂಟ್ ಫ್ರೀಜ್ ಮಾಡಲಾಗುವುದು ಇದರಿಂದ ಅನಾಹುತ ತಡೆಯಲು ಸಹಕಾರಿಯಾಗಲಿದೆ. ಈ ಕುರಿತು ಜನಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಎಲ್ಲಾ ರೀತಿಯಿಂದಲೂ ಕ್ರಮ ಕೈಗೊಳ್ಳುತ್ತಿದೆ ಎಂದರು.

ಇಡೀ ಭಾರದಲ್ಲೇ ಕರ್ನಾಟಕ ಸೈಬರ್ ಪೊಲೀಸ್ ವಿಭಾಗ ಅಗ್ರ ಸ್ಥಾನದಲ್ಲಿದೆ, ಇದಕ್ಕಾಗಿ ಸಿಐಡಿ ಇಲಾಖೆಯ ಕಟ್ಟಡದಲ್ಲಿ ಒಂದು ಫ್ಲೋರ್ ನ್ನು ಸಕಲ ಸಲಕರಣೆಗಳಿಂದ ಸಿದ್ಧಗೊಳಿಸಲಾಗಿದೆ, ಬೇರೆ ಬೇರೆ ರಾಜ್ಯದ ತಂಡಗಳು ಬಂದು ಇಲ್ಲಿ ಅಧ್ಯಯನ ಮಾಡುವಷ್ಟು ಅಭಿವೃದ್ದಿ ಮಾಡಲಾಗಿದೆ ಎಂದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

14 minutes ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

3 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

8 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

8 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago