ಶಾಸಕ ಮಾಡಾಳ್ ಪುತ್ರನ ಲಂಚಾವತಾರ ಪ್ರಕರಣ; ಪ್ರಕರಣ ತನಿಖೆ ಹಂತದಲ್ಲಿದೆ; ಪಕ್ಷಕ್ಕೆ ಯಾವ ಹಾನಿ ಆಗಲ್ಲ-ಗೃಹ ಸಚಿವ ಆರಗ ಜ್ಞಾನೇಂದ್ರ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕಾರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದಿಂದ ಬಿಜೆಪಿಗೆ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಕರಣದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಕೈಗೆ ಸಿಕ್ಕಿಬಿದಿದ್ದಾರೆ ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಲಿದೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ಸಿಕ್ಕ ಹಣ ಕಾನೂನು ಬಾಹಿರವಾಗಿದ್ದರೇ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು,

ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲಂಚ ಸ್ವೀಕಾರ ವಿಚಾರ ತಿಳಿಯುತ್ತಿದ್ದಂತೆ ಶಾಸಕ ವಿರೂಪಾಕ್ಷಪ್ಪ ಈಗಾಗಲೇ ನೈತಿಕ ಹೊಣೆಹೊತ್ತು ಕೆ. ಎಸ್. ಡಿ.ಎಲ್ ಗೆ ರಾಜಿನಾಮೆ ನೀಡಿದ್ದಾರೆ, ಮಾನ್ಯ ಮುಖ್ಯಂಮತ್ರಿಗಳು ಈ ಕುರಿತು ಪ್ರತಿಕ್ರಿಯೆ ನೀಡಿದ್ದೂ ಪಾರದರ್ಶಕ ತನಿಖೆ ನಡೆಯಲಿದೆ.

ಲೋಕಾಯುಕ್ತ ಕತ್ತು ಹಿಸುಕಿದ್ದ ಕಾಂಗ್ರೆಸ್ ಪಕ್ಷ :

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಲೋಕಾಯುಕ್ತವನ್ನು ಕುತ್ತಿಗೆ ಹಿಸುಕಿ ಕುಳಿತಿದ್ದರು, ಆಗ ಲೋಕಾಯುಕ್ತ ಇದ್ದಿದ್ದರೇ ಕಾಂಗ್ರೆಸ್ ನ ಹಲವು ಪ್ರಮುಖರು ಇಂದು ಜೈಲಿನಲ್ಲಿರಬೇಕಿತ್ತು, ನಾವು ಇಂದು ಲೋಕಾಯುಕ್ತಕ್ಕೆ ಸಂಪೂರ್ಣ ಶಕ್ತಿ ನೀಡಿದ್ದೇವೆ ಹೀಗಾಗಿ ರೈಡ್ ಗಳು ನಡೆಯುತ್ತಿದೆ. ಇದಕ್ಕೆ ಬಿಜೆಪಿ, ಕಾಂಗ್ರೆಸ್ ಎಂಬ ವ್ಯತ್ಯಾಸವಿಲ್ಲ ಎಂದರು.

ಇದಕ್ಕೂ ಮೊದಲು ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ದುಡ್ಡು ಸಿಕ್ಕಿರುವ ಉದಾಹರಣೆಗಳಿವೆ, ಇಷ್ಟೆಲ್ಲ ಆಗಿದ್ದರೂ ಯಾವ ನೈತಿಕತೆ ಇಟ್ಟುಕೊಂಡು ಮಾತನಾಡುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು.

ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಕಿತ್ತಾಟ :

ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಇಬ್ಬರ ಜಗಳದಿಂದ ಈಗಾಗಲೇ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ, ಇಬ್ಬರಿಗೂ ಎರಡುಮೂರು ಬಾರಿ ಎಚ್ಚರಿಕೆ ನೀಡಿದ್ದರೂ ಮುಂದುವರೆಸಿದ್ದಾರೆ, ಇವರ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ, ಇಬ್ಬರಿಗೂ ಇನ್ನೂ ಯಾವ ಪೋಸ್ಟ್ ನೀಡಿಲ್ಲ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳಿಂದ ಮೋಸ:

ಸೈಬರ್ ಕ್ರೈಮ್ ಪ್ರಕರಣಗಳು ಈಗಾಗಲೆ ಹೆಚ್ಚುತ್ತಿದ್ದೂ ಸೈಬರ್ ಕ್ರೈಮ್ ವಿಭಾಗವನ್ನು ಗಟ್ಟಿಗೊಳಿಸಿದ್ದೇವೆ ಮತ್ತು ಸಾರ್ವಜನಿಕರು ಕೂಡ ಇದಕ್ಕೆ ಸಹಕರಿಸಬೇಕಾಗುತ್ತದೆ, ಸೈಬರ್ ವಂಚನೆಗೊಳಗಾದ ( ಗೋಲ್ಡನ್ ಹವರ್ ) ಎರಡು ಗಂಟೆಗಳ ಒಳಗೆ 112 ಗೆ ಕರೆ ಮಾಡಿ ವಿವರ ನೀಡಿದರೆ ಅಕೌಂಟ್ ಫ್ರೀಜ್ ಮಾಡಲಾಗುವುದು ಇದರಿಂದ ಅನಾಹುತ ತಡೆಯಲು ಸಹಕಾರಿಯಾಗಲಿದೆ. ಈ ಕುರಿತು ಜನಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಎಲ್ಲಾ ರೀತಿಯಿಂದಲೂ ಕ್ರಮ ಕೈಗೊಳ್ಳುತ್ತಿದೆ ಎಂದರು.

ಇಡೀ ಭಾರದಲ್ಲೇ ಕರ್ನಾಟಕ ಸೈಬರ್ ಪೊಲೀಸ್ ವಿಭಾಗ ಅಗ್ರ ಸ್ಥಾನದಲ್ಲಿದೆ, ಇದಕ್ಕಾಗಿ ಸಿಐಡಿ ಇಲಾಖೆಯ ಕಟ್ಟಡದಲ್ಲಿ ಒಂದು ಫ್ಲೋರ್ ನ್ನು ಸಕಲ ಸಲಕರಣೆಗಳಿಂದ ಸಿದ್ಧಗೊಳಿಸಲಾಗಿದೆ, ಬೇರೆ ಬೇರೆ ರಾಜ್ಯದ ತಂಡಗಳು ಬಂದು ಇಲ್ಲಿ ಅಧ್ಯಯನ ಮಾಡುವಷ್ಟು ಅಭಿವೃದ್ದಿ ಮಾಡಲಾಗಿದೆ ಎಂದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

9 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago