ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕಾರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದಿಂದ ಬಿಜೆಪಿಗೆ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಕರಣದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಕೈಗೆ ಸಿಕ್ಕಿಬಿದಿದ್ದಾರೆ ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಲಿದೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ಸಿಕ್ಕ ಹಣ ಕಾನೂನು ಬಾಹಿರವಾಗಿದ್ದರೇ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು,
ಲೋಕಾಯುಕ್ತ ಕತ್ತು ಹಿಸುಕಿದ್ದ ಕಾಂಗ್ರೆಸ್ ಪಕ್ಷ :
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಲೋಕಾಯುಕ್ತವನ್ನು ಕುತ್ತಿಗೆ ಹಿಸುಕಿ ಕುಳಿತಿದ್ದರು, ಆಗ ಲೋಕಾಯುಕ್ತ ಇದ್ದಿದ್ದರೇ ಕಾಂಗ್ರೆಸ್ ನ ಹಲವು ಪ್ರಮುಖರು ಇಂದು ಜೈಲಿನಲ್ಲಿರಬೇಕಿತ್ತು, ನಾವು ಇಂದು ಲೋಕಾಯುಕ್ತಕ್ಕೆ ಸಂಪೂರ್ಣ ಶಕ್ತಿ ನೀಡಿದ್ದೇವೆ ಹೀಗಾಗಿ ರೈಡ್ ಗಳು ನಡೆಯುತ್ತಿದೆ. ಇದಕ್ಕೆ ಬಿಜೆಪಿ, ಕಾಂಗ್ರೆಸ್ ಎಂಬ ವ್ಯತ್ಯಾಸವಿಲ್ಲ ಎಂದರು.
ಇದಕ್ಕೂ ಮೊದಲು ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ದುಡ್ಡು ಸಿಕ್ಕಿರುವ ಉದಾಹರಣೆಗಳಿವೆ, ಇಷ್ಟೆಲ್ಲ ಆಗಿದ್ದರೂ ಯಾವ ನೈತಿಕತೆ ಇಟ್ಟುಕೊಂಡು ಮಾತನಾಡುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು.
ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಇಬ್ಬರ ಜಗಳದಿಂದ ಈಗಾಗಲೇ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ, ಇಬ್ಬರಿಗೂ ಎರಡುಮೂರು ಬಾರಿ ಎಚ್ಚರಿಕೆ ನೀಡಿದ್ದರೂ ಮುಂದುವರೆಸಿದ್ದಾರೆ, ಇವರ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ, ಇಬ್ಬರಿಗೂ ಇನ್ನೂ ಯಾವ ಪೋಸ್ಟ್ ನೀಡಿಲ್ಲ ಎಂದರು.
ಸೈಬರ್ ಕ್ರೈಮ್ ಪ್ರಕರಣಗಳು ಈಗಾಗಲೆ ಹೆಚ್ಚುತ್ತಿದ್ದೂ ಸೈಬರ್ ಕ್ರೈಮ್ ವಿಭಾಗವನ್ನು ಗಟ್ಟಿಗೊಳಿಸಿದ್ದೇವೆ ಮತ್ತು ಸಾರ್ವಜನಿಕರು ಕೂಡ ಇದಕ್ಕೆ ಸಹಕರಿಸಬೇಕಾಗುತ್ತದೆ, ಸೈಬರ್ ವಂಚನೆಗೊಳಗಾದ ( ಗೋಲ್ಡನ್ ಹವರ್ ) ಎರಡು ಗಂಟೆಗಳ ಒಳಗೆ 112 ಗೆ ಕರೆ ಮಾಡಿ ವಿವರ ನೀಡಿದರೆ ಅಕೌಂಟ್ ಫ್ರೀಜ್ ಮಾಡಲಾಗುವುದು ಇದರಿಂದ ಅನಾಹುತ ತಡೆಯಲು ಸಹಕಾರಿಯಾಗಲಿದೆ. ಈ ಕುರಿತು ಜನಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಎಲ್ಲಾ ರೀತಿಯಿಂದಲೂ ಕ್ರಮ ಕೈಗೊಳ್ಳುತ್ತಿದೆ ಎಂದರು.
ಇಡೀ ಭಾರದಲ್ಲೇ ಕರ್ನಾಟಕ ಸೈಬರ್ ಪೊಲೀಸ್ ವಿಭಾಗ ಅಗ್ರ ಸ್ಥಾನದಲ್ಲಿದೆ, ಇದಕ್ಕಾಗಿ ಸಿಐಡಿ ಇಲಾಖೆಯ ಕಟ್ಟಡದಲ್ಲಿ ಒಂದು ಫ್ಲೋರ್ ನ್ನು ಸಕಲ ಸಲಕರಣೆಗಳಿಂದ ಸಿದ್ಧಗೊಳಿಸಲಾಗಿದೆ, ಬೇರೆ ಬೇರೆ ರಾಜ್ಯದ ತಂಡಗಳು ಬಂದು ಇಲ್ಲಿ ಅಧ್ಯಯನ ಮಾಡುವಷ್ಟು ಅಭಿವೃದ್ದಿ ಮಾಡಲಾಗಿದೆ ಎಂದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…