ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದ ಸಚಿವ ಕೃಷ್ಣಬೈರೇಗೌಡ

ಮುನಿರತ್ನ ಭ್ರಷ್ಟಚಾರಿ ಅನ್ನೊದು ಗೊತ್ತಿತ್ತು. ಆದರೆ ವಿಕೃತ ಮನಸ್ಸಿನ ಸೆಕ್ಸ್ ರಾಕೇಟ್ ನಡೆಸುತ್ತಾನೆ ಅಂತ ಈಗ ಗೊತ್ತಾಯಿತು. ದುರುದ್ದೇಶ ಪೂರ್ವಕವಾಗಿ ಏಡ್ಸ್ ಪೀಡಿತ ಮಹಿಳೆಯರನ್ನು ಬಿಟ್ಟು ದಂಧೆ ಮಾಡಿದ್ದು ದುರಂತ. ಅಧಿಕಾರಿಗಳು, ರಾಜಕಾರಣಿಗಳು ಅವರ ಅಧಿಕಾರ ದುರುಪಯೋಗ ಕಂಡುಬಂದಿದೆ. ಪೊಲೀಸ್ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ದುರ್ಬಳಕೆ ಆಗಿದೆ. ಹನಿಟ್ರ್ಯಾಪ್ ಗೆ ಒಳಗಾದವರಿಗೆ ಬ್ಲಾಕ್ ಮೇಲ್ ಮಾಡಿ ಅವರ ಮೂಲಕ ಟ್ರ್ಯಾಪ್ ಮಾಡಿಸಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಶಾಸಕ ಮುನಿರತ್ನ ವಿಚಾರವಾಗಿ ಮಾತನಾಡಿದ್ದಾರೆ.

ಶಾಸಕ ಮುನಿರತ್ನ ಅವರನ್ನ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಮುನಿರತ್ನ ಕಳಪೆ ಕೆಲಸ ಮಾಡಿ ಭ್ರಷ್ಟಾಚಾರ ಮಾಡೋದು ಗೊತ್ತಿತ್ತು. ವ್ಯವಸ್ಥಿತವಾದ ಹನಿಟ್ರ್ಯಾಫ್ ನಡೆಸುತ್ತಿದ್ದರು ಅನ್ನೋ ಅಘಾತಕಾರಿ ಅಂಶ ಬಯಲಾಗಿದೆ. ಹೆಣ್ಣು ಮಕ್ಕಳನ್ನ ಬಳಸಿಕೊಂಡು ಸರ್ಕಾರಿ ಅಧಿಕಾರಿಗಳನ್ನ ಟ್ರ್ಯಾಪ್ ಮಾಡಿದ್ದಾರೆ. ಅವರ ಮೂಲಕ ಕೆಲ ರಾಜಕಾರಣಿಗಳನ್ನ ಟ್ರ್ಯಾಪ್ ಮಾಡಿದ್ದಾರೆ. ರಾಜಕೀಯವಾಗಿ ಅಧಿಕಾರ ದುರಪಯೋಗಕ್ಕೆ ಬಳಸಿಕೊಳ್ಳುತ್ತಿದ್ದರು. ಉದ್ದೇಶಪೂರ್ವಕವಾಗಿ ಏಡ್ಸ್ ಇರುವವರನ್ನು ಕರೆದುಕೊಂಡು ಬಂದು ಏಡ್ಸ್ ಹಂಚಿದ್ದಾರೆ. ಈ ವಿಚಾರವಾಗಿ ದೂರುಗಳಿಂದ ಕೇಳಿಬಂದಿದೆ. ದೂರು ಕೊಟ್ಟಿರೋದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆ ಸಂತ್ರಸ್ಥೆ. ನೀರಲ್ಲಿ ಮಾತ್ರೆ ಹಾಕಿ ನಗ್ನವಾಗಿ ಸೆರೆಹಿಡಿದು ಬ್ಲಾಕ್ ಮೇಲ್ ಮಾಡಿದ್ದಾರೆ. ಪೊಲೀಸ್ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನ ಬ್ಲಾಕ್ ಮೇಲ್ ಮಾಡಿ ಕೆಲಸ ಮಾಡಿಸಿಕೊಂಡಿದ್ದಾರೆ. ಕೃತ್ಯಗಳಿಗೆ ಪೊಲೀಸ್ ವಾಹನಗಳನ್ನ ಸಹ ಬಳಸಿದ್ದಾರೆ. ಬಿಜೆಪಿಯವರು ಇವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಕುಮಾರಸ್ವಾಮಿ, ಆರ್ ಅಶೋಕ್ ಖಂಡಿಸಿದ್ದೀರಾ..? ಬಿಜೆಪಿ ಕಾರ್ಯಕರ್ತೆ ಮೇಲೆ ಅತ್ಯಾಚಾರ ಮಾಡಿದ್ರೂ ಬಾಯಿ ಮುಚ್ಚಿಕೊಂಡಿದ್ದಾರೆ.. ಅವರ ಸಪೋರ್ಟ್ ಇಲ್ಲದೆ ಇದೆಲ್ಲಾ ನಡೆಯುತ್ತಾ…? ಒಂದು ಕಡೆ ಒಕ್ಕಲಿಗರಿಗೆ ಅವಮಾನ ದಲಿತರಿಗೆ ಅವಹೇಳನ,‌ ಇನ್ನೊಂದು ಕಡೆ ಹನಿಟ್ರ್ಯಾಪ್. ಬಿಜೆಪಿಯವರು ಹಾಗೂ ಕುಮಾರಸ್ವಾಮಿ ಅವರು ನಾಚಿಕೆ ಮಾನ‌ ಮರ್ಯಾದೆ ಇಲ್ಲದೆ ಅವರ ಪರವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಕ್ಕಲಿಗರಿಗೆ ಅವಹೇಳನವಾದಾಗ ಬಾಲಗಂಗಾಧರನಾಥ ಸ್ವಾಮೀಜಿ ನೇತೃತ್ವದಲ್ಲಿ ಈ ಹಿಂದೆ ಹೋರಾಟ ನಡೆದಿದೆ. ಶಾಸಕ ಮುನಿರತ್ನ ನಡೆಗೆ ಸಮುದಾಯ ಎಚ್ಚೆತ್ತುಕೊಳ್ಳಬೇಕು. ಮುನಿರತ್ನ ವಿಚಾರದಲ್ಲಿ ಸಮುದಾಯದಿಂದ ಖಂಡನೆ ಮಾಡಬೇಕಿದೆ. ಸಮುದಾಯದ ಎಲ್ಲರೂ ನಿರ್ಮಲಾನಂದನಾಥ ಶ್ರೀಗಳಿಗೆ ಗೌರವ ಕೊಡ್ತೀವಿ. ಈಗ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಖಂಡನಾ ಸಭೆ ಆಗಬೇಕಿದೆ. ಇಡೀ ಸಮುದಾಯದ ಗೌರವಕ್ಕೆ ಚ್ಯುತಿ ತಂದಿದೆ. ನಾವು ಧ್ವನಿ ಎತ್ತಬೇಕು. ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ನಿರ್ಮಲಾನಂದನಾಥ ಶ್ರೀಗಳಿಗಿದೆ. ಒಕ್ಕಲಿಗ ಶಾಸಕರು, ಸಚಿವರುಗಳು ಸ್ವಾಮೀಜಿ ಜೊತೆ ಮಾತನಾಡಿದ್ದೇವೆ. ಒಕ್ಕಲಿಗರು ದಲಿತರ ಸ್ವಾಭಿಮಾನಕ್ಕೆ ಮುನಿರತ್ನ ಧಕ್ಕೆ ತಂದಿದ್ದಾನೆ. ಎಲ್ಲರ ಅಭಿಪ್ರಾಯ ಶ್ರೀಗಳ ಗಮನಕ್ಕೆ ತರ್ತೇವೆ. ಮುಂದಿನ ನಡೆ ಶ್ರೀಗಳಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

7 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

8 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago