ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದ ಸಚಿವ ಕೃಷ್ಣಬೈರೇಗೌಡ

ಮುನಿರತ್ನ ಭ್ರಷ್ಟಚಾರಿ ಅನ್ನೊದು ಗೊತ್ತಿತ್ತು. ಆದರೆ ವಿಕೃತ ಮನಸ್ಸಿನ ಸೆಕ್ಸ್ ರಾಕೇಟ್ ನಡೆಸುತ್ತಾನೆ ಅಂತ ಈಗ ಗೊತ್ತಾಯಿತು. ದುರುದ್ದೇಶ ಪೂರ್ವಕವಾಗಿ ಏಡ್ಸ್ ಪೀಡಿತ ಮಹಿಳೆಯರನ್ನು ಬಿಟ್ಟು ದಂಧೆ ಮಾಡಿದ್ದು ದುರಂತ. ಅಧಿಕಾರಿಗಳು, ರಾಜಕಾರಣಿಗಳು ಅವರ ಅಧಿಕಾರ ದುರುಪಯೋಗ ಕಂಡುಬಂದಿದೆ. ಪೊಲೀಸ್ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ದುರ್ಬಳಕೆ ಆಗಿದೆ. ಹನಿಟ್ರ್ಯಾಪ್ ಗೆ ಒಳಗಾದವರಿಗೆ ಬ್ಲಾಕ್ ಮೇಲ್ ಮಾಡಿ ಅವರ ಮೂಲಕ ಟ್ರ್ಯಾಪ್ ಮಾಡಿಸಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಶಾಸಕ ಮುನಿರತ್ನ ವಿಚಾರವಾಗಿ ಮಾತನಾಡಿದ್ದಾರೆ.

ಶಾಸಕ ಮುನಿರತ್ನ ಅವರನ್ನ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಮುನಿರತ್ನ ಕಳಪೆ ಕೆಲಸ ಮಾಡಿ ಭ್ರಷ್ಟಾಚಾರ ಮಾಡೋದು ಗೊತ್ತಿತ್ತು. ವ್ಯವಸ್ಥಿತವಾದ ಹನಿಟ್ರ್ಯಾಫ್ ನಡೆಸುತ್ತಿದ್ದರು ಅನ್ನೋ ಅಘಾತಕಾರಿ ಅಂಶ ಬಯಲಾಗಿದೆ. ಹೆಣ್ಣು ಮಕ್ಕಳನ್ನ ಬಳಸಿಕೊಂಡು ಸರ್ಕಾರಿ ಅಧಿಕಾರಿಗಳನ್ನ ಟ್ರ್ಯಾಪ್ ಮಾಡಿದ್ದಾರೆ. ಅವರ ಮೂಲಕ ಕೆಲ ರಾಜಕಾರಣಿಗಳನ್ನ ಟ್ರ್ಯಾಪ್ ಮಾಡಿದ್ದಾರೆ. ರಾಜಕೀಯವಾಗಿ ಅಧಿಕಾರ ದುರಪಯೋಗಕ್ಕೆ ಬಳಸಿಕೊಳ್ಳುತ್ತಿದ್ದರು. ಉದ್ದೇಶಪೂರ್ವಕವಾಗಿ ಏಡ್ಸ್ ಇರುವವರನ್ನು ಕರೆದುಕೊಂಡು ಬಂದು ಏಡ್ಸ್ ಹಂಚಿದ್ದಾರೆ. ಈ ವಿಚಾರವಾಗಿ ದೂರುಗಳಿಂದ ಕೇಳಿಬಂದಿದೆ. ದೂರು ಕೊಟ್ಟಿರೋದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆ ಸಂತ್ರಸ್ಥೆ. ನೀರಲ್ಲಿ ಮಾತ್ರೆ ಹಾಕಿ ನಗ್ನವಾಗಿ ಸೆರೆಹಿಡಿದು ಬ್ಲಾಕ್ ಮೇಲ್ ಮಾಡಿದ್ದಾರೆ. ಪೊಲೀಸ್ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನ ಬ್ಲಾಕ್ ಮೇಲ್ ಮಾಡಿ ಕೆಲಸ ಮಾಡಿಸಿಕೊಂಡಿದ್ದಾರೆ. ಕೃತ್ಯಗಳಿಗೆ ಪೊಲೀಸ್ ವಾಹನಗಳನ್ನ ಸಹ ಬಳಸಿದ್ದಾರೆ. ಬಿಜೆಪಿಯವರು ಇವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಕುಮಾರಸ್ವಾಮಿ, ಆರ್ ಅಶೋಕ್ ಖಂಡಿಸಿದ್ದೀರಾ..? ಬಿಜೆಪಿ ಕಾರ್ಯಕರ್ತೆ ಮೇಲೆ ಅತ್ಯಾಚಾರ ಮಾಡಿದ್ರೂ ಬಾಯಿ ಮುಚ್ಚಿಕೊಂಡಿದ್ದಾರೆ.. ಅವರ ಸಪೋರ್ಟ್ ಇಲ್ಲದೆ ಇದೆಲ್ಲಾ ನಡೆಯುತ್ತಾ…? ಒಂದು ಕಡೆ ಒಕ್ಕಲಿಗರಿಗೆ ಅವಮಾನ ದಲಿತರಿಗೆ ಅವಹೇಳನ,‌ ಇನ್ನೊಂದು ಕಡೆ ಹನಿಟ್ರ್ಯಾಪ್. ಬಿಜೆಪಿಯವರು ಹಾಗೂ ಕುಮಾರಸ್ವಾಮಿ ಅವರು ನಾಚಿಕೆ ಮಾನ‌ ಮರ್ಯಾದೆ ಇಲ್ಲದೆ ಅವರ ಪರವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಕ್ಕಲಿಗರಿಗೆ ಅವಹೇಳನವಾದಾಗ ಬಾಲಗಂಗಾಧರನಾಥ ಸ್ವಾಮೀಜಿ ನೇತೃತ್ವದಲ್ಲಿ ಈ ಹಿಂದೆ ಹೋರಾಟ ನಡೆದಿದೆ. ಶಾಸಕ ಮುನಿರತ್ನ ನಡೆಗೆ ಸಮುದಾಯ ಎಚ್ಚೆತ್ತುಕೊಳ್ಳಬೇಕು. ಮುನಿರತ್ನ ವಿಚಾರದಲ್ಲಿ ಸಮುದಾಯದಿಂದ ಖಂಡನೆ ಮಾಡಬೇಕಿದೆ. ಸಮುದಾಯದ ಎಲ್ಲರೂ ನಿರ್ಮಲಾನಂದನಾಥ ಶ್ರೀಗಳಿಗೆ ಗೌರವ ಕೊಡ್ತೀವಿ. ಈಗ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಖಂಡನಾ ಸಭೆ ಆಗಬೇಕಿದೆ. ಇಡೀ ಸಮುದಾಯದ ಗೌರವಕ್ಕೆ ಚ್ಯುತಿ ತಂದಿದೆ. ನಾವು ಧ್ವನಿ ಎತ್ತಬೇಕು. ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ನಿರ್ಮಲಾನಂದನಾಥ ಶ್ರೀಗಳಿಗಿದೆ. ಒಕ್ಕಲಿಗ ಶಾಸಕರು, ಸಚಿವರುಗಳು ಸ್ವಾಮೀಜಿ ಜೊತೆ ಮಾತನಾಡಿದ್ದೇವೆ. ಒಕ್ಕಲಿಗರು ದಲಿತರ ಸ್ವಾಭಿಮಾನಕ್ಕೆ ಮುನಿರತ್ನ ಧಕ್ಕೆ ತಂದಿದ್ದಾನೆ. ಎಲ್ಲರ ಅಭಿಪ್ರಾಯ ಶ್ರೀಗಳ ಗಮನಕ್ಕೆ ತರ್ತೇವೆ. ಮುಂದಿನ ನಡೆ ಶ್ರೀಗಳಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

2 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

14 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

15 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

15 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

24 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago