ಶಾಸಕ ಯತ್ನಾಳ್ ಉಚ್ಚಾಟನೆ ವಿಚಾರ: ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಏನಂದ್ರು…?

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ Basanagouda Patil Yatnal ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.
ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

9 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

12 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

21 hours ago