ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎರಡು‌ ಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಆಚರಿಸಲಾಗುವುದು‌ ಎಂದು ಕೆಪಿಸಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷೀಪತಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ‌ ಸೇವೆ ಹೊರತುಪಡಿಸಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಳಿತಗೊಳಿಸಲಾಗುವುದು. ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ‌ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಅವರಿಗೆ ಮನವಿ‌ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಶಾಸಕರ ಕಚೇರಿ ಹಾಗೂ ಮನೆಯಲ್ಲಿ ಅಕ್ರಮ ಹಣ ಪತ್ತೆಯಾದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಋಜುವಾತಾದರೂ ಪೊಲೀಸ್ ಇಲಾಖೆ ಆರೋಪಿತ ಶಾಸಕರನ್ನು ಬಂಧಿಸಿಲ್ಲ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಎರಡು ಗಂಟೆಗಳ ಕಾಲ‌ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

40% ಕಮಿಷನ್ ವಸೂಲಿ‌ ಮಾಡುವ ಕುರಿತಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಖಾಸಗಿ ಅನುದಾನರಹಿತ ಶಾಲಾ‌ ಕಾಲೇಜುಗಳ ಸಂಘ(ರುಕ್ಸಾ), ಮಠಾಧೀಶರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈಗ ಶಾಸಕರ ಪುತ್ರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಶಾಸಕರ ದೂರವಾಣಿ‌ ಸಂಭಾಷಣೆ ಕೂಡ ಇದೆ. ಮುಖ್ಯಮಂತ್ರಿಗಳು ಇನ್ನೂ ದಾಖಲೆ, ಸಾಕ್ಷಿ ಕೇಳುವುದಾದರೆ ಇದಕ್ಕಿಂತ ನಾಚಿಕೆಕೇಡು ಬೇರೊಂದಿಲ್ಲ ಆರೋಪ‌ ಮಾಡಿದ್ದರು. ಸಿಎಂ ದಾಖಲೆ, ಸಾಕ್ಷಿ ಕೇಳಿದ್ದರು.

ಕರ್ನಾಟಕ‌ಸಾಬೂನು‌ ಮತ್ತು‌ಮಾರ್ಜಕ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ದಾಕಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ಲೊಕಾಯುಕ್ತರ ವಶಪಡಿಸಿರುವ ದಾಖಲೆಗಳೇ ಸಾಕ್ಷಿ. ಇದಕ್ಕಿಂತ ಬೇರೆ ದಾಖಲೆ ಕೇಳಿದರೆ ಅದಕ್ಕಿಂತ ನಾಚಿಕೆ ಬೇರೊಂದಿಲ್ಲ‌ ಎಂದು ಕಿಡಿಕಾರಿದರು.

ಮಾ.9 ರಂದು ಸಾಂಕೇತಿಕವಾಗಿ ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು. ಅಷ್ಟರಲ್ಲಿ ಶಾಸಕರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಂದಿನಂತೆ ಶಾಲಾ, ಕಾಲೇಜು, ವೈದ್ಯಕೀಯ ಸೇವೆ, ಸಾರಿಗೆ ಕಾರ್ಯನಿರ್ವಹಿಸಲಿವೆ.

ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ. ಹೇಮಂತರಾಜು, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆಂಪಣ್ಣ, ರಮೇಶ್, ಮಂಜುನಾಥ್, ಕುಮಾರ್, ಅಖಿಲೇಶ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

10 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

11 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

13 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

15 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

18 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

23 hours ago